ಚಿತ್ರ ಮಂಜರಿ

ಧ್ರುವ ಸರ್ಜಾ ಜೊತೆ ನಟಿಸಿದ್ದ ಬಾಡಿ ಬಿಲ್ಡರ್ “ಜೋ ಲಿಂಡ್ಕರ್ 30ನೇ ವಯಸ್ಸಿಗೆ ನಿಧನ

ಬೆಂಗಳೂರು: ನಟ ಧ್ರುವ ಸರ್ಜಾ ನಾಯಕರಾಗಿದ್ದ ‘ಪೊಗರು’ ಸಿನಿಮಾದಲ್ಲಿ ನಟಿಸಿದ್ದ, ಬಾಡಿ ಬಿಲ್ಡಿಂಗ್‌ನಲ್ಲಿ ವಿಶ್ವ ವಿಖ್ಯಾತಿ ಪಡೆದಿದ್ದ ಜೋ ಲಿಂಡ್ಕರ್ ನಿಧನರಾಗಿದ್ದಾರೆ.

ಫಿಟ್‌ನೆಸ್ ಬಗ್ಗೆ ಕಾಳಜಿ ಹೊಂದಿದ್ದ, ಅಂತರರಾಷ್ಟ್ರೀಯ ಮಟ್ಟದಲ್ಲಿ ಬಾಡಿ ಬಿಲ್ಡರ್ ಆಗಿ ಗುರುತಿಸಿಕೊಂಡಿದ್ದ ಜೋ ಲಿಂಡ್ಕರ್ ಕಿರಿಯ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು.

ಜೋ ಲಿಂಡರ್ ನಿಧನಕ್ಕೆ ಧ್ರುವ ಸರ್ಜಾ ಸಂತಾಪ ಸೂಚಿಸಿದ್ದಾರೆ. ‘ಪೊಗರು’ ಚಿತ್ರದ‌ ಕ್ರೈಮ್ಯಾಕ್ಸ್‌ ದೃಶ್ಯದಲ್ಲಿ ಜೋ ಲಿಂಡ್ಕರ್ ಕಾಣಿಸಿಕೊಂಡಿದ್ದರು. ಇದರಲ್ಲಿ ಧ್ರುವ ಸರ್ಜಾ ಹಾಗೂ ಜೋ ಲಿಂಡ್ಕ‌ರ್ ಫೈಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಲಿಂಡ್ಕ‌ ನಿಧನದ ಬಗ್ಗೆ ದಿಗ್ಧಮೆ ವ್ಯಕ್ತಪಡಿಸಿ ಧ್ರುವ ಸರ್ಜಾ ಸಂತಾಪ ಸೂಚಿಸಿದ್ದಾರೆ. ಲಿಂಡ್ನರ್ ನಿಧನದ ಬಗ್ಗೆ ಗೆಳತಿ ನಿಚಾ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ‌ ಹಂಚಿಕೊಂಡಿದ್ದಾರೆ.

ಏಕಾಏಕಿ ರಕ್ತನಾಳಗಳ ಸಮಸ್ಯೆಯಿಂದಾಗಿ ಲಿಂಡರ್ ನಿಧನರಾದರು ಎಂದು ಹೇಳಿದ್ದಾರೆ.

ಲಿಂಡ್ಕರ್ ಅವರು ಜರ್ಮನ್ ಮೂಲದವರು, ಸದ್ಯ ಅವರು ಗೆಳತಿ ವಿಚಾ ಜೊತೆಯಲ್ಲಿ ಥೈಲ್ಯಾಂಡ್‌ನಲ್ಲಿ ವಾಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

3 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago