ಹಿಂದಿ ಹಾಗೂ ಮರಾಠಿ ಭಾಷೆಯ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದ ನಟ ಶ್ರೇಯಸ್ ತಲ್ಪಾಡೆ ಹೃದಯಾಘಾತಕ್ಕೊಳಗಾಗಿದ್ದಾರೆ. 47 ವರ್ಷದ ನಟ ಬಹುತಾರಾಗಣದ ʼವೆಲ್ಕಮ್ ಟು ದ ಜಂಗಲ್ʼ ಚಿತ್ರದಲ್ಲಿ ನಟಿಸುತ್ತಿದ್ದು ಚಿತ್ರೀಕರಣ ಮುಗಿಸಿ ಮನೆಗೆ ಮರಳಿದ ನಂತರ ತೀವ್ರ ಆಯಾಸಕ್ಕೆ ಒಳಗಾಗಿದ್ದಾರೆ.
ಪತ್ನಿ ದೀಪ್ತಿ ತಲ್ಪಾಡೆಗೆ ನಟ ಶ್ರೇಯಸ್ ತಲ್ಪಾಡೆ ವಿಷಯ ತಿಳಿಸಿದ್ದು, ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗದಲ್ಲಿ ಶ್ರೇಯಸ್ ಕುಸಿದುಬಿದ್ದಿದ್ದು, ಸದ್ಯ ನಟ ಮುಂಬೈನ ಅಂಧೇರಿಯಲ್ಲಿರುವ ಬೆಲ್ಲೆವ್ಯೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರೀಕರಣದಲ್ಲಿ ಆಕ್ಷನ್ ಸೀಕ್ವೆನ್ಸ್ಗಳಲ್ಲಿ ಭಾಗವಹಿಸಿದ್ದ ತಲ್ಪಾಡೆಗೆ ಹೃದಯಾಘಾತಕ್ಕೊಳಗಾಗಿರುವುದು ಬಾಲಿವುಡ್ ಮಂದಿಯಲ್ಲಿ ಆತಂಕವನ್ನುಂಟುಮಾಡಿದೆ. ಶ್ರೇಯಸ್ ತಲ್ಪಾಡೆಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ಇನ್ನು ಶ್ರೇಯಸ್ ತಲ್ಪಡೆ ʼಅಜಾಗ್ರತʼ ಎಂಬ ಸೌತ್ ಸಿನಿಮಾದಲ್ಲಿಯೂ ಸಹ ನಟಿಸುತ್ತಿದ್ದು, ಈ ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…