ಚಿತ್ರ ಮಂಜರಿ

ಬಾಲಿವುಡ್‌ ನಟ ಶ್ರೇಯಸ್‌ ತಲ್ಪಾಡೆಗೆ ಹೃದಯಾಘಾತ

ಹಿಂದಿ ಹಾಗೂ ಮರಾಠಿ ಭಾಷೆಯ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದ ನಟ ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೊಳಗಾಗಿದ್ದಾರೆ. 47 ವರ್ಷದ ನಟ ಬಹುತಾರಾಗಣದ ʼವೆಲ್‌ಕಮ್‌ ಟು ದ ಜಂಗಲ್‌ʼ ಚಿತ್ರದಲ್ಲಿ ನಟಿಸುತ್ತಿದ್ದು ಚಿತ್ರೀಕರಣ ಮುಗಿಸಿ ಮನೆಗೆ ಮರಳಿದ ನಂತರ ತೀವ್ರ ಆಯಾಸಕ್ಕೆ ಒಳಗಾಗಿದ್ದಾರೆ.

ಪತ್ನಿ ದೀಪ್ತಿ ತಲ್ಪಾಡೆಗೆ ನಟ ಶ್ರೇಯಸ್‌ ತಲ್ಪಾಡೆ ವಿಷಯ ತಿಳಿಸಿದ್ದು, ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗದಲ್ಲಿ ಶ್ರೇಯಸ್‌ ಕುಸಿದುಬಿದ್ದಿದ್ದು, ಸದ್ಯ ನಟ ಮುಂಬೈನ ಅಂಧೇರಿಯಲ್ಲಿರುವ ಬೆಲ್ಲೆವ್ಯೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರೀಕರಣದಲ್ಲಿ ಆಕ್ಷನ್‌ ಸೀಕ್ವೆನ್ಸ್‌ಗಳಲ್ಲಿ ಭಾಗವಹಿಸಿದ್ದ ತಲ್ಪಾಡೆಗೆ ಹೃದಯಾಘಾತಕ್ಕೊಳಗಾಗಿರುವುದು ಬಾಲಿವುಡ್‌ ಮಂದಿಯಲ್ಲಿ ಆತಂಕವನ್ನುಂಟುಮಾಡಿದೆ. ಶ್ರೇಯಸ್‌ ತಲ್ಪಾಡೆಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ಇನ್ನು ಶ್ರೇಯಸ್‌ ತಲ್ಪಡೆ ʼಅಜಾಗ್ರತʼ ಎಂಬ ಸೌತ್‌ ಸಿನಿಮಾದಲ್ಲಿಯೂ ಸಹ ನಟಿಸುತ್ತಿದ್ದು, ಈ ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿದ್ದಾರೆ.

andolana

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago