ನಟಿ ರೇಖಾ
ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ ನಡೆಸುವ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಈ ಬಾರಿ ಬಾಲಿವುಡ್ ನಟಿ ರೇಖಾ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಈ ಕುರಿತು ಸ್ವತಃ ಕಂದಾಯ ಸಚಿವ ಆರ್.ಅಶೋಕ್ ಅವರೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಯಲಿದ್ದು, ನಾಳೆ ಫಿಲ್ಮ್ ಫೆಸ್ಟಿವಲ್ ಲೋಗೋವನ್ನು ಲಾಂಚ್ ಮಾಡಲಾಗುತ್ತಿದೆ ಎನ್ನುವ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದಾರೆ.
ಅಂದುಕೊಂಡಂತೆ ಆಗಿದ್ದರೆ ಫೆಬ್ರವರಿಯಲ್ಲೇ ಚಿತ್ರೋತ್ಸವ ನಡೆಯಬೇಕಿತ್ತು. ಆದರೆ, ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಸರಕಾರದಿಂದ ಈವರೆಗೂ ಯಾವುದೇ ಅನುದಾನ ಬಾರದೇ ಇರುವ ಕಾರಣದಿಂದಾಗಿ ಈ ತಿಂಗಳು ನಡೆಸಲಿಕ್ಕೆ ಆಗಲಿಲ್ಲ. ಚಿತ್ರೋತ್ಸವ ನಡೆಯುವುದಕ್ಕೆ ಬರೋಬ್ಬರಿ ಮೂರು ತಿಂಗಳ ಕಾಲ ಸಿದ್ಧತೆ ಬೇಕು ಎನ್ನುವುದು ಅಕಾಡೆಮಿಯಲ್ಲಿ ಕೆಲಸ ಮಾಡಿರುವವರ ಹೇಳಿಕೆ. ಆದರೆ, ಕಂದಾಯ ಸಚಿವರು ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಸುವುದಾಗಿ ಹೇಳಿದ್ದಾರೆ. ಈ ಕುರಿತು ನಾಳೆ ಅವರು ವಿವರಣೆ ನೀಡುತ್ತಾರೆ ಎನ್ನುವುದು ನಿರೀಕ್ಷೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಕಮಿಷನರ್ ಸೀಮಾ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…