ಬಾಲಿವುಡ್ನ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರು ಬುಧವಾರ (ಆಗಸ್ಟ್ 2) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ತಮ್ಮ ಒಡೆತನದ ಎನ್ಡಿ ಸ್ಟುಡಿಯೋಸ್ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಎನ್ಡಿ ಸ್ಟುಡಿಯೋದಲ್ಲಿ ಬಿಗ್ಬಾಸ್ ವೀಕೆಂಡ್ ಎಪಿಸೋಡ್ ಶೂಟ್ ಮಾಡಲಾಗುತ್ತಿತ್ತು. ಆಗಸ್ಟ್ 9ರಂದು ಅವರು ಬರ್ತ್ಡೇ ಆಚರಿಸಿಕೊಳ್ಳಬೇಕಿತ್ತು. ಅದಕ್ಕೂ ಮೊದಲೇ ಅವರು ಪ್ರಾಣ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಸದ್ಯ ಪೊಲೀಸರು ಇಲ್ಲಿಗೆ ಆಗಮಿಸಿದ್ದು, ತನಿಖೆ ಪ್ರಗತಿಯಲ್ಲಿದೆ. ನಿತಿನ್ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ.
ನಿತಿನ್ ದೇಸಾಯಿ ಅವರ ಸಾವು ಅನೇಕರಿಗೆ ಶಾಕ್ ಮೂಡಿಸಿದೆ. ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯಾವ ವಿಚಾರ ಕಾರಣ ಆಯಿತು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಸದ್ಯ ನಿತಿನ್ ದೇಸಾಯಿ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ನಿತಿನ್ ದೇಸಾಯಿ ಅವರು ಬಾಲಿವುಡ್ನಲ್ಲಿ ಖ್ಯಾತ ಕಲಾ ನಿರ್ದೇಶಕರಾಗಿದ್ದರು. ಅವರು ನಾಲ್ಕು ರಾಷ್ಟ್ರಪ್ರಶಸ್ತಿಗಳನ್ನು ಸ್ವೀಕರಿಸಿದ್ದರು. ಅವರು ನಿರ್ಮಾಣ ಮಾಡುತ್ತಿದ್ದ ಅದ್ದೂರಿ ಸೆಟ್ಗಳನ್ನು ನೋಡಿ ಪ್ರೇಕ್ಷಕರು ಮೂಕವಿಸ್ಮಿತರಾಗಿದ್ದರು. ಹಲವು ಸಿನಿಮಾ ಯಶಸ್ಸಿಗೆ ಇವರು ಹಾಕುತ್ತಿದ್ದ ಸೆಟ್ಗಳು ಕೂಡ ಕಾರಣ ಆಗಿದ್ದವು.
ಹಮ್ ದಿಲ್ ದೇ ಚುಕೆ ಸನಮ್’, ‘ದೇವದಾಸ್’, ‘ಜೋಧಾ ಅಕ್ಬರ್’ ಹಾಗೂ ‘ಲಗಾನ್’ ಮೊದಲಾದ ಸಿನಿಮಾಗಳಿಗೆ ನಿತಿನ್ ಅವರು ಸೆಟ್ ನಿರ್ಮಾಣ ಮಾಡಿದ್ದರು. ವಿಧು ವಿನೋದ್ ಚೋಪ್ರಾ ನಿರ್ದೇಶನದ ‘1942: ಎ ಲವ್ ಸ್ಟೋರಿ’ ಸಿನಿಮಾದ ಸೆಟ್ ಸಾಕಷ್ಟು ಗಮನ ಸೆಳೆದಿತ್ತು. ಸಂಜಯ್ ಲೀಲಾ ಬನ್ಸಾಲಿ, ವಿಧು ವಿನೋದ್ ಚೋಪ್ರಾ, ರಾಜ್ಕುಮಾರ್ ಹಿರಾನಿ ಮೊದಲಾದ ಖ್ಯಾತ ನಾಮರ ಜೊತೆ ನಿತಿನ್ ಕೆಲಸ ಮಾಡಿದ್ದರು. ‘ಇದು ನಿಜಕ್ಕೂ ಶಾಕಿಂಗ್. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ನಿತಿನ್ ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ.
ನಿತಿನ್ ದೇಸಾಯಿ ಒಡೆತನದ ಎನ್ಡಿ ಸ್ಟುಡಿಯೋಸ್ನಲ್ಲಿ ಹಲವು ಸಿನಿಮಾಗಳನ್ನು ಶೂಟ್ ಮಾಡಲಾಗಿದೆ. ಸಲ್ಮಾನ್ ಖಾನ್ ಅವರು ಹೋಸ್ಟ್ ಮಾಡುವ ‘ಬಿಗ್ ಬಾಸ್’ನ ವೀಕೆಂಡ್ ಎಪಿಸೋಡ್ನ ಈ ಮೊದಲು ಇಲ್ಲಿಯೇ ಶೂಟ್ ಮಾಡಲಾಗುತ್ತಿತ್ತು. ನಿತಿನ್ ಅವರು ನಿರ್ಮಾಪಕರಾಗಿ, ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದರು.
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…