ಚಿತ್ರ ಮಂಜರಿ

ಬಾಲಿವುಡ್ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆ

ಬಾಲಿವುಡ್​ನ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರು ಬುಧವಾರ (ಆಗಸ್ಟ್ 2) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ತಮ್ಮ ಒಡೆತನದ ಎನ್​ಡಿ ಸ್ಟುಡಿಯೋಸ್​ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎನ್​ಡಿ ಸ್ಟುಡಿಯೋದಲ್ಲಿ ಬಿಗ್‌ಬಾಸ್‌ ವೀಕೆಂಡ್ ಎಪಿಸೋಡ್ ಶೂಟ್​ ಮಾಡಲಾಗುತ್ತಿತ್ತು. ಆಗಸ್ಟ್ 9ರಂದು ಅವರು ಬರ್ತ್​ಡೇ ಆಚರಿಸಿಕೊಳ್ಳಬೇಕಿತ್ತು. ಅದಕ್ಕೂ ಮೊದಲೇ ಅವರು ಪ್ರಾಣ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಸದ್ಯ ಪೊಲೀಸರು ಇಲ್ಲಿಗೆ ಆಗಮಿಸಿದ್ದು, ತನಿಖೆ ಪ್ರಗತಿಯಲ್ಲಿದೆ. ನಿತಿನ್ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ.

ನಿತಿನ್ ದೇಸಾಯಿ ಅವರ ಸಾವು ಅನೇಕರಿಗೆ ಶಾಕ್ ಮೂಡಿಸಿದೆ. ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯಾವ ವಿಚಾರ ಕಾರಣ ಆಯಿತು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಸದ್ಯ ನಿತಿನ್ ದೇಸಾಯಿ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ನಿತಿನ್ ದೇಸಾಯಿ ಅವರು ಬಾಲಿವುಡ್​ನಲ್ಲಿ ಖ್ಯಾತ ಕಲಾ ನಿರ್ದೇಶಕರಾಗಿದ್ದರು. ಅವರು ನಾಲ್ಕು ರಾಷ್ಟ್ರಪ್ರಶಸ್ತಿಗಳನ್ನು ಸ್ವೀಕರಿಸಿದ್ದರು. ಅವರು ನಿರ್ಮಾಣ ಮಾಡುತ್ತಿದ್ದ ಅದ್ದೂರಿ ಸೆಟ್​​ಗಳನ್ನು ನೋಡಿ ಪ್ರೇಕ್ಷಕರು ಮೂಕವಿಸ್ಮಿತರಾಗಿದ್ದರು. ಹಲವು ಸಿನಿಮಾ ಯಶಸ್ಸಿಗೆ ಇವರು ಹಾಕುತ್ತಿದ್ದ ಸೆಟ್​ಗಳು ಕೂಡ ಕಾರಣ ಆಗಿದ್ದವು.

ಹಮ್​ ದಿಲ್​ ದೇ ಚುಕೆ ಸನಮ್’, ‘ದೇವದಾಸ್’, ‘ಜೋಧಾ ಅಕ್ಬರ್’ ಹಾಗೂ ‘ಲಗಾನ್’ ಮೊದಲಾದ ಸಿನಿಮಾಗಳಿಗೆ ನಿತಿನ್ ಅವರು ಸೆಟ್ ನಿರ್ಮಾಣ ಮಾಡಿದ್ದರು. ವಿಧು ವಿನೋದ್ ಚೋಪ್ರಾ ನಿರ್ದೇಶನದ ‘1942: ಎ ಲವ್ ಸ್ಟೋರಿ’ ಸಿನಿಮಾದ ಸೆಟ್ ಸಾಕಷ್ಟು ಗಮನ ಸೆಳೆದಿತ್ತು. ಸಂಜಯ್ ಲೀಲಾ ಬನ್ಸಾಲಿ, ವಿಧು ವಿನೋದ್ ಚೋಪ್ರಾ, ರಾಜ್​ಕುಮಾರ್ ಹಿರಾನಿ ಮೊದಲಾದ ಖ್ಯಾತ ನಾಮರ ಜೊತೆ ನಿತಿನ್ ಕೆಲಸ ಮಾಡಿದ್ದರು. ‘ಇದು ನಿಜಕ್ಕೂ ಶಾಕಿಂಗ್​. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ನಿತಿನ್ ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ.

ನಿತಿನ್ ದೇಸಾಯಿ ಒಡೆತನದ ಎನ್​ಡಿ ಸ್ಟುಡಿಯೋಸ್​ನಲ್ಲಿ ಹಲವು ಸಿನಿಮಾಗಳನ್ನು ಶೂಟ್ ಮಾಡಲಾಗಿದೆ. ಸಲ್ಮಾನ್ ಖಾನ್ ಅವರು ಹೋಸ್ಟ್​ ಮಾಡುವ ‘ಬಿಗ್ ಬಾಸ್’ನ ವೀಕೆಂಡ್ ಎಪಿಸೋಡ್​ನ ಈ ಮೊದಲು ಇಲ್ಲಿಯೇ ಶೂಟ್ ಮಾಡಲಾಗುತ್ತಿತ್ತು. ನಿತಿನ್ ಅವರು ನಿರ್ಮಾಪಕರಾಗಿ, ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದರು.

andolanait

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

8 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

8 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

8 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

9 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

10 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

18 hours ago