ಚಿತ್ರ ಮಂಜರಿ

ಬಾಲಿವುಡ್ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆ

ಬಾಲಿವುಡ್​ನ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರು ಬುಧವಾರ (ಆಗಸ್ಟ್ 2) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ತಮ್ಮ ಒಡೆತನದ ಎನ್​ಡಿ ಸ್ಟುಡಿಯೋಸ್​ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎನ್​ಡಿ ಸ್ಟುಡಿಯೋದಲ್ಲಿ ಬಿಗ್‌ಬಾಸ್‌ ವೀಕೆಂಡ್ ಎಪಿಸೋಡ್ ಶೂಟ್​ ಮಾಡಲಾಗುತ್ತಿತ್ತು. ಆಗಸ್ಟ್ 9ರಂದು ಅವರು ಬರ್ತ್​ಡೇ ಆಚರಿಸಿಕೊಳ್ಳಬೇಕಿತ್ತು. ಅದಕ್ಕೂ ಮೊದಲೇ ಅವರು ಪ್ರಾಣ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಸದ್ಯ ಪೊಲೀಸರು ಇಲ್ಲಿಗೆ ಆಗಮಿಸಿದ್ದು, ತನಿಖೆ ಪ್ರಗತಿಯಲ್ಲಿದೆ. ನಿತಿನ್ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ.

ನಿತಿನ್ ದೇಸಾಯಿ ಅವರ ಸಾವು ಅನೇಕರಿಗೆ ಶಾಕ್ ಮೂಡಿಸಿದೆ. ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯಾವ ವಿಚಾರ ಕಾರಣ ಆಯಿತು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಸದ್ಯ ನಿತಿನ್ ದೇಸಾಯಿ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ನಿತಿನ್ ದೇಸಾಯಿ ಅವರು ಬಾಲಿವುಡ್​ನಲ್ಲಿ ಖ್ಯಾತ ಕಲಾ ನಿರ್ದೇಶಕರಾಗಿದ್ದರು. ಅವರು ನಾಲ್ಕು ರಾಷ್ಟ್ರಪ್ರಶಸ್ತಿಗಳನ್ನು ಸ್ವೀಕರಿಸಿದ್ದರು. ಅವರು ನಿರ್ಮಾಣ ಮಾಡುತ್ತಿದ್ದ ಅದ್ದೂರಿ ಸೆಟ್​​ಗಳನ್ನು ನೋಡಿ ಪ್ರೇಕ್ಷಕರು ಮೂಕವಿಸ್ಮಿತರಾಗಿದ್ದರು. ಹಲವು ಸಿನಿಮಾ ಯಶಸ್ಸಿಗೆ ಇವರು ಹಾಕುತ್ತಿದ್ದ ಸೆಟ್​ಗಳು ಕೂಡ ಕಾರಣ ಆಗಿದ್ದವು.

ಹಮ್​ ದಿಲ್​ ದೇ ಚುಕೆ ಸನಮ್’, ‘ದೇವದಾಸ್’, ‘ಜೋಧಾ ಅಕ್ಬರ್’ ಹಾಗೂ ‘ಲಗಾನ್’ ಮೊದಲಾದ ಸಿನಿಮಾಗಳಿಗೆ ನಿತಿನ್ ಅವರು ಸೆಟ್ ನಿರ್ಮಾಣ ಮಾಡಿದ್ದರು. ವಿಧು ವಿನೋದ್ ಚೋಪ್ರಾ ನಿರ್ದೇಶನದ ‘1942: ಎ ಲವ್ ಸ್ಟೋರಿ’ ಸಿನಿಮಾದ ಸೆಟ್ ಸಾಕಷ್ಟು ಗಮನ ಸೆಳೆದಿತ್ತು. ಸಂಜಯ್ ಲೀಲಾ ಬನ್ಸಾಲಿ, ವಿಧು ವಿನೋದ್ ಚೋಪ್ರಾ, ರಾಜ್​ಕುಮಾರ್ ಹಿರಾನಿ ಮೊದಲಾದ ಖ್ಯಾತ ನಾಮರ ಜೊತೆ ನಿತಿನ್ ಕೆಲಸ ಮಾಡಿದ್ದರು. ‘ಇದು ನಿಜಕ್ಕೂ ಶಾಕಿಂಗ್​. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ನಿತಿನ್ ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ.

ನಿತಿನ್ ದೇಸಾಯಿ ಒಡೆತನದ ಎನ್​ಡಿ ಸ್ಟುಡಿಯೋಸ್​ನಲ್ಲಿ ಹಲವು ಸಿನಿಮಾಗಳನ್ನು ಶೂಟ್ ಮಾಡಲಾಗಿದೆ. ಸಲ್ಮಾನ್ ಖಾನ್ ಅವರು ಹೋಸ್ಟ್​ ಮಾಡುವ ‘ಬಿಗ್ ಬಾಸ್’ನ ವೀಕೆಂಡ್ ಎಪಿಸೋಡ್​ನ ಈ ಮೊದಲು ಇಲ್ಲಿಯೇ ಶೂಟ್ ಮಾಡಲಾಗುತ್ತಿತ್ತು. ನಿತಿನ್ ಅವರು ನಿರ್ಮಾಪಕರಾಗಿ, ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದರು.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago