ಚಿತ್ರ ಮಂಜರಿ

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ: ಗೋಲ್ಡನ್‌ ಸ್ಟಾರ್‌ಗೆ ನೋಟಿಸ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡಿಪುರ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ಅರಣ್ಯ ಇಲಾಖೆ ನೊಟೀಸ್‌ ಜಾರಿ ಮಾಡಿದ್ದು, ತಕ್ಷಣ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದೆ.

ನಟ ಗಣೇಶ್ ಅವರು ಗುಂಡ್ಲುಪೇಟೆ ತಾಲ್ಲೂಕು ಹಂಗಳ ಹೋಬಳಿಯ ಜಕ್ಕಹಳ್ಳಿಯ ಸರ್ವೆ ನಂಬರ್ 105 ರಲ್ಲಿ 1 ಎಕರೆ 24 ಗುಂಟೆ ಜಮೀನು ಹೊಂದಿದ್ದು, ಮನೆ ಹಾಗೂ ತೋಟಗಾರಿಕೆ ಉದ್ದೇಶಕ್ಕಾಗಿ ತಾತ್ಕಾಲಿಕ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದಿದ್ದಾರೆ.

ಆದರೆ ಅರಣ್ಯ ಸೂಕ್ಷ್ಮ ಪರಿಸರ ವಲಯದಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ ಎಂದು ಪರಿಸರ ವಾದಿಗಳು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಂಡಿಪುರ ಹುಲಿಧಾಮ ನಿರ್ದೇಶಕ ಡಾ.ಪಿ.ರಮೇಶ್‌ ಕುಮಾರ್‌ ಅವರು ಗಣೇಶ್ ಅವರಿಗೆ ನೊಟೀಸ್‌ ಜಾರಿಗೊಳಿಸಿದ್ದಾರೆ.

ಕಟ್ಟಡ ನಿರ್ಮಿಸುತ್ತಿರುವ ಸ್ಥಳ ಸೂಕ್ಷ್ಮ ಪರಿಸರ ವಲಯದಲ್ಲಿದೆ. ಇಲ್ಲಿ ಕಟ್ಟಡ ನಿರ್ಮಿಸಲು ಯಾವ ಅನುಮತಿ ಪಡೆದಿದ್ದೀರಿ, ಯಾವ ಉದ್ದೇಶಕ್ಕೆ ಕಟ್ಟಡ ನಿರ್ಮಾಣವಾಗುತ್ತಿದೆ ಎನ್ನುವ ವಿವರಣೆಯನ್ನು ನೀಡುವಂತೆಯೂ ಗಣೇಶ್ ಅವರಿಗೆ ಸೂಚಿಸಲಾಗಿದೆ.

ನಟ ಗಣೇಶ್ ಅವರು 2023ರ ಮಾರ್ಚ್ 15ರಂದು ವಾಸ ಹಾಗೂ ಕೃಷಿ ಉಪಕರಣಗಳನ್ನು ಇರಿಸಲು ಮನೆ ನಿರ್ಮಿಸಲು ಅನುಮತಿ ನೀಡಬೇಕು ಎಂದು ಕೋರಿದ್ದರು. ಜಮೀನಿನಲ್ಲಿ ಸ್ವಂತ ಉಪಯೋಗಕ್ಕೆ ತಾತ್ಕಾಲಿಕ ಮನೆ ನಿರ್ಮಿಸಲು ಬಂಡೀಪುರ ನಿರ್ದೇಶಕರು ಅನುಮತಿ ನೀಡಿದ್ದಾರೆ.

ಅನುಮತಿಗಿಂತ ಹೆಚ್ಚು ಜಾಗದಲ್ಲಿ ಮನೆ ನಿರ್ಮಿಸುವಂತಿಲ್ಲ. ವಾಣಿಜ್ಯ ಉದ್ದೇಶದ ಕಟ್ಟಡ ನಿರ್ಮಿಸುವಂತಿಲ್ಲ ಎಂಬ ಷರತ್ತನ್ನೂ ಹಾಕಿದ್ದರು. ಆದರೆ ಸ್ಥಳದಲ್ಲಿ ದೊಡ್ಡ ಕಾಂಕ್ರೀಟ್ ಪಿಲ್ಲರ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಮೇಲ್ನೋಟಕ್ಕೆ ಬೃಹತ್ ಶಾಶ್ವತ ಕಟ್ಟಡ ನಿರ್ಮಿಸುವಂತೆ ಕಾಣಿಸುತ್ತಿದೆ. ಹೀಗಾಗಿ ಪರಿಸರವಾದಿಗಳು, ಅರಣ್ಯ ಇಲಾಖೆ ಇದಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದರು.

andolanait

Recent Posts

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

1 hour ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

1 hour ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

2 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

3 hours ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

3 hours ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

3 hours ago