ಚಿತ್ರ ಮಂಜರಿ

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ: ಗೋಲ್ಡನ್‌ ಸ್ಟಾರ್‌ಗೆ ನೋಟಿಸ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡಿಪುರ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ಅರಣ್ಯ ಇಲಾಖೆ ನೊಟೀಸ್‌ ಜಾರಿ ಮಾಡಿದ್ದು, ತಕ್ಷಣ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದೆ.

ನಟ ಗಣೇಶ್ ಅವರು ಗುಂಡ್ಲುಪೇಟೆ ತಾಲ್ಲೂಕು ಹಂಗಳ ಹೋಬಳಿಯ ಜಕ್ಕಹಳ್ಳಿಯ ಸರ್ವೆ ನಂಬರ್ 105 ರಲ್ಲಿ 1 ಎಕರೆ 24 ಗುಂಟೆ ಜಮೀನು ಹೊಂದಿದ್ದು, ಮನೆ ಹಾಗೂ ತೋಟಗಾರಿಕೆ ಉದ್ದೇಶಕ್ಕಾಗಿ ತಾತ್ಕಾಲಿಕ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದಿದ್ದಾರೆ.

ಆದರೆ ಅರಣ್ಯ ಸೂಕ್ಷ್ಮ ಪರಿಸರ ವಲಯದಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ ಎಂದು ಪರಿಸರ ವಾದಿಗಳು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಂಡಿಪುರ ಹುಲಿಧಾಮ ನಿರ್ದೇಶಕ ಡಾ.ಪಿ.ರಮೇಶ್‌ ಕುಮಾರ್‌ ಅವರು ಗಣೇಶ್ ಅವರಿಗೆ ನೊಟೀಸ್‌ ಜಾರಿಗೊಳಿಸಿದ್ದಾರೆ.

ಕಟ್ಟಡ ನಿರ್ಮಿಸುತ್ತಿರುವ ಸ್ಥಳ ಸೂಕ್ಷ್ಮ ಪರಿಸರ ವಲಯದಲ್ಲಿದೆ. ಇಲ್ಲಿ ಕಟ್ಟಡ ನಿರ್ಮಿಸಲು ಯಾವ ಅನುಮತಿ ಪಡೆದಿದ್ದೀರಿ, ಯಾವ ಉದ್ದೇಶಕ್ಕೆ ಕಟ್ಟಡ ನಿರ್ಮಾಣವಾಗುತ್ತಿದೆ ಎನ್ನುವ ವಿವರಣೆಯನ್ನು ನೀಡುವಂತೆಯೂ ಗಣೇಶ್ ಅವರಿಗೆ ಸೂಚಿಸಲಾಗಿದೆ.

ನಟ ಗಣೇಶ್ ಅವರು 2023ರ ಮಾರ್ಚ್ 15ರಂದು ವಾಸ ಹಾಗೂ ಕೃಷಿ ಉಪಕರಣಗಳನ್ನು ಇರಿಸಲು ಮನೆ ನಿರ್ಮಿಸಲು ಅನುಮತಿ ನೀಡಬೇಕು ಎಂದು ಕೋರಿದ್ದರು. ಜಮೀನಿನಲ್ಲಿ ಸ್ವಂತ ಉಪಯೋಗಕ್ಕೆ ತಾತ್ಕಾಲಿಕ ಮನೆ ನಿರ್ಮಿಸಲು ಬಂಡೀಪುರ ನಿರ್ದೇಶಕರು ಅನುಮತಿ ನೀಡಿದ್ದಾರೆ.

ಅನುಮತಿಗಿಂತ ಹೆಚ್ಚು ಜಾಗದಲ್ಲಿ ಮನೆ ನಿರ್ಮಿಸುವಂತಿಲ್ಲ. ವಾಣಿಜ್ಯ ಉದ್ದೇಶದ ಕಟ್ಟಡ ನಿರ್ಮಿಸುವಂತಿಲ್ಲ ಎಂಬ ಷರತ್ತನ್ನೂ ಹಾಕಿದ್ದರು. ಆದರೆ ಸ್ಥಳದಲ್ಲಿ ದೊಡ್ಡ ಕಾಂಕ್ರೀಟ್ ಪಿಲ್ಲರ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಮೇಲ್ನೋಟಕ್ಕೆ ಬೃಹತ್ ಶಾಶ್ವತ ಕಟ್ಟಡ ನಿರ್ಮಿಸುವಂತೆ ಕಾಣಿಸುತ್ತಿದೆ. ಹೀಗಾಗಿ ಪರಿಸರವಾದಿಗಳು, ಅರಣ್ಯ ಇಲಾಖೆ ಇದಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದರು.

andolanait

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

5 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

6 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

6 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

6 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

10 hours ago