ಚಿತ್ರ ಮಂಜರಿ

ಈ ಬಾರಿ ಹುಟ್ಟುಹಬ್ಬದ ದಿನದಂದು ನಿಮ್ಮೊಂದಿಗೆ ಇರಲಾರೆ: ರಾಕಿಂಗ್‌ ಸ್ಟಾರ್‌!

ಬೆಂಗಳೂರು: ಕೆಜಿಎಫ್‌ ಖ್ಯಾತಿಯ ಕನ್ನಡದ ಸ್ಟಾರ್‌ ನಟ ರಾಕಿಂಗ್‌ ಸ್ಟಾರ್‌ ಯಶ್‌ ಈ ಬಾರಿಯೂ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

ಸಿನಿಮಾದಿಂದ ಬಿಡುವಿಲ್ಲದ ಕೆಲಸವಿದ್ದು, ಅಭಿಮಾನಿಗಳೊಂದಿಗೆ ಹುಟ್ಟುಹಬ್ಬದಂದು ಅಭಿಮಾನಿಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಕಿಂಗ್‌ ಸ್ಟಾರ್‌ ಯಶ್‌ ತಿಳಿಸಿದ್ದಾರೆ.

ಕೆಜಿಎಫ್‌ ಸರಣಿ ಚಿತ್ರಗಳ ಬಳಿಕ ಯಶಸ್ಸು ಕಂಡಿರುವ ನಟ ಯಶ್‌, ಬಂದ ಚಿತ್ರಗಳನ್ನು ಒಪ್ಪಿಕೊಳ್ಳದೇ, ಕಥೆ ಆಯ್ಕೆಯಲ್ಲಿ ಜಾಣ ನಡೆ ತೋರಿಸಿರುವ ಅವರು, ನೂತನ ಚಿತ್ರದಲ್ಲಿ ಬ್ಯೂಸಿಯಾಗಿದ್ದಾರೆ.

ಸದ್ಯ ಯಶ್‌ ತಮ್ಮ ಮುಂದಿನ ಚಿತ್ರವಾದ ಟಾಕ್ಸಿಕ್‌ ನಲ್ಲಿ ಬ್ಯುಸಿಯಾಗಿದ್ದು, ಚಿತ್ರೀಕರಣದಲ್ಲಿ ಬಿಡುವಿಲ್ಲದೇ ಕೆಲಸ ಮಾಡುತ್ತಿದ್ದು, ಜನವರಿ ೮ ರಂದು ತಮ್ಮ ಹುಟ್ಟು ಹಬ್ಬದ ದಿನದಂದು ಅಭಿಮಾನಿಗಳಿಗೆ ಸಿಗಲು ಆಗುತ್ತಿಲ್ಲ ಎಂದು ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್‌ನಲ್ಲೇನಿದೆ?

ಜನವರಿ 8..

ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನು, ನನ್ನ ಜೊತೆ ಖುದ್ದು ಇದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ.

ನನಗೂ ಅಷ್ಟೇ.. ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ

ಆದರೆ, ಸಿನಿಮಾದ ಕೆಲಸ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಬೇಕಿರುವುದರಿಂದ ಈ ಜನವರಿ 8ರಂದು ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ..

ನಿಮ್ಮ ಅಭಿಮಾನ ನನ್ನ ಅನುಪಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು..

ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ..

ನಿಮ್ಮ ಪ್ರೀತಿಯ -ಯಶ್

andolanait

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

8 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

12 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

12 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

12 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

12 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

12 hours ago