ಬೆಂಗಳೂರು: ಕೆಜಿಎಫ್ ಖ್ಯಾತಿಯ ಕನ್ನಡದ ಸ್ಟಾರ್ ನಟ ರಾಕಿಂಗ್ ಸ್ಟಾರ್ ಯಶ್ ಈ ಬಾರಿಯೂ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಸಿನಿಮಾದಿಂದ ಬಿಡುವಿಲ್ಲದ ಕೆಲಸವಿದ್ದು, ಅಭಿಮಾನಿಗಳೊಂದಿಗೆ ಹುಟ್ಟುಹಬ್ಬದಂದು ಅಭಿಮಾನಿಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಕಿಂಗ್ ಸ್ಟಾರ್ ಯಶ್ ತಿಳಿಸಿದ್ದಾರೆ.
ಕೆಜಿಎಫ್ ಸರಣಿ ಚಿತ್ರಗಳ ಬಳಿಕ ಯಶಸ್ಸು ಕಂಡಿರುವ ನಟ ಯಶ್, ಬಂದ ಚಿತ್ರಗಳನ್ನು ಒಪ್ಪಿಕೊಳ್ಳದೇ, ಕಥೆ ಆಯ್ಕೆಯಲ್ಲಿ ಜಾಣ ನಡೆ ತೋರಿಸಿರುವ ಅವರು, ನೂತನ ಚಿತ್ರದಲ್ಲಿ ಬ್ಯೂಸಿಯಾಗಿದ್ದಾರೆ.
ಸದ್ಯ ಯಶ್ ತಮ್ಮ ಮುಂದಿನ ಚಿತ್ರವಾದ ಟಾಕ್ಸಿಕ್ ನಲ್ಲಿ ಬ್ಯುಸಿಯಾಗಿದ್ದು, ಚಿತ್ರೀಕರಣದಲ್ಲಿ ಬಿಡುವಿಲ್ಲದೇ ಕೆಲಸ ಮಾಡುತ್ತಿದ್ದು, ಜನವರಿ ೮ ರಂದು ತಮ್ಮ ಹುಟ್ಟು ಹಬ್ಬದ ದಿನದಂದು ಅಭಿಮಾನಿಗಳಿಗೆ ಸಿಗಲು ಆಗುತ್ತಿಲ್ಲ ಎಂದು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.
ಪೋಸ್ಟ್ನಲ್ಲೇನಿದೆ?
ಜನವರಿ 8..
ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನು, ನನ್ನ ಜೊತೆ ಖುದ್ದು ಇದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ.
ನನಗೂ ಅಷ್ಟೇ.. ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ
ಆದರೆ, ಸಿನಿಮಾದ ಕೆಲಸ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಬೇಕಿರುವುದರಿಂದ ಈ ಜನವರಿ 8ರಂದು ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ..
ನಿಮ್ಮ ಅಭಿಮಾನ ನನ್ನ ಅನುಪಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು..
ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ..
ನಿಮ್ಮ ಪ್ರೀತಿಯ -ಯಶ್
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…