ಬೆಂಗಳೂರು: ಕೆಜಿಎಫ್ ಖ್ಯಾತಿಯ ಕನ್ನಡದ ಸ್ಟಾರ್ ನಟ ರಾಕಿಂಗ್ ಸ್ಟಾರ್ ಯಶ್ ಈ ಬಾರಿಯೂ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಸಿನಿಮಾದಿಂದ ಬಿಡುವಿಲ್ಲದ ಕೆಲಸವಿದ್ದು, ಅಭಿಮಾನಿಗಳೊಂದಿಗೆ ಹುಟ್ಟುಹಬ್ಬದಂದು ಅಭಿಮಾನಿಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಕಿಂಗ್ ಸ್ಟಾರ್ ಯಶ್ ತಿಳಿಸಿದ್ದಾರೆ.
ಕೆಜಿಎಫ್ ಸರಣಿ ಚಿತ್ರಗಳ ಬಳಿಕ ಯಶಸ್ಸು ಕಂಡಿರುವ ನಟ ಯಶ್, ಬಂದ ಚಿತ್ರಗಳನ್ನು ಒಪ್ಪಿಕೊಳ್ಳದೇ, ಕಥೆ ಆಯ್ಕೆಯಲ್ಲಿ ಜಾಣ ನಡೆ ತೋರಿಸಿರುವ ಅವರು, ನೂತನ ಚಿತ್ರದಲ್ಲಿ ಬ್ಯೂಸಿಯಾಗಿದ್ದಾರೆ.
ಸದ್ಯ ಯಶ್ ತಮ್ಮ ಮುಂದಿನ ಚಿತ್ರವಾದ ಟಾಕ್ಸಿಕ್ ನಲ್ಲಿ ಬ್ಯುಸಿಯಾಗಿದ್ದು, ಚಿತ್ರೀಕರಣದಲ್ಲಿ ಬಿಡುವಿಲ್ಲದೇ ಕೆಲಸ ಮಾಡುತ್ತಿದ್ದು, ಜನವರಿ ೮ ರಂದು ತಮ್ಮ ಹುಟ್ಟು ಹಬ್ಬದ ದಿನದಂದು ಅಭಿಮಾನಿಗಳಿಗೆ ಸಿಗಲು ಆಗುತ್ತಿಲ್ಲ ಎಂದು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.
ಪೋಸ್ಟ್ನಲ್ಲೇನಿದೆ?
ಜನವರಿ 8..
ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನು, ನನ್ನ ಜೊತೆ ಖುದ್ದು ಇದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ.
ನನಗೂ ಅಷ್ಟೇ.. ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ
ಆದರೆ, ಸಿನಿಮಾದ ಕೆಲಸ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಬೇಕಿರುವುದರಿಂದ ಈ ಜನವರಿ 8ರಂದು ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ..
ನಿಮ್ಮ ಅಭಿಮಾನ ನನ್ನ ಅನುಪಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು..
ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ..
ನಿಮ್ಮ ಪ್ರೀತಿಯ -ಯಶ್
ಲಕ್ಷ್ಮಿಕಾಂತ್ ಕೊಮಾರಪ್ಪ ಹವಾಮಾನ ವೈಪರೀತ್ಯದಿಂದ ಬೆಳೆಗಾರರಿಗೆ ಹೊಸ ಸಂಕಷ್ಟ; ಕೊಯ್ಲು, ಪಲ್ಪಿಂಗ್ ಜೊತೆಗೆ ಒಣಗಿಸುವುದೂ ಸವಾಲು ಸೋಮವಾರಪೇಟೆ: ಕಾಫಿ ತೋಟಗಳಲ್ಲಿ…
ಉಮೇಶ್ ಹಲಗೂರು ಪ್ರವಾಸಿಗರನ್ನು ರಕ್ಷಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ ಲು ಸಾರ್ವಜನಿಕರ ಆಗ್ರಹ ಜಿಲ್ಲಾಡಳಿತದ ಆದೇಶಕ್ಕೂ ಕ್ಯಾರೇ ಎನ್ನದ ಪ್ರವಾಸಿಗರು…
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…