ಚಿತ್ರ ಮಂಜರಿ

’L.G.M’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ

ಕ್ಯಾಪ್ಟನ್ ಕೂಲ್ ಖ್ಯಾತಿಯ ಟೀಂ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಪತ್ನಿ ಸಾಕ್ಷಿ ಜೊತೆಗೂಡಿ ಧೋನಿ ಎಂಟರ್ ಟೈನ್ಮೆಂಟ್ ಬ್ಯಾನರ್ ಶುರು ಮಾಡಿರುವ ಅವರು ತಮಿಳು ಸೇರಿದಂತೆ ಬೇರೆ ಭಾಷೆಗಳ ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಈ ಬ್ಯಾನರ್ ಯಡಿಯಲ್ಲಿ ಮೂಡಿಬರ್ತಿರುವ ’L.G.M’ ಸಿನಿಮಾದ ಫಸ್ಟ್ ಲುಕ್ ಅನಾವರಣ ಮಾಡಿ ಇಡೀ ತಂಡಕ್ಕೆ ಕ್ಯಾಪ್ಟನ್ ಕೂಲ್ ಶುಭಾಶಯ ತಿಳಿಸಿದ್ದಾರೆ.
’L.G.M’ ಸಿನಿಮಾಗೆ ವಿಕಾಸ್ ಹಸಿಜಾ ಬಂಡವಾಳ ಹೂಡಿದ್ದಾರೆ. ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿರುವ ಅವರು, ಕೊನೆಯ ಹಂತದ ಚಿತ್ರೀಕರಣದಲ್ಲಿದ್ದು, ಶೀಘ್ರದಲ್ಲಿಯೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಶುರುವಾಗಲಿವೆ. ಈ ಸಿನಿಮಾ ಮೂಲಕ ತಮಿಳು ಚಿತ್ರೋದ್ಯಮದಲ್ಲಿ ನಮ್ಮ ಪಯಣ ಆರಂಭವಾಗಿದೆ ಎಂದು ತಿಳಿಸಿದ್ದಾರೆ.
ಚಿತ್ರದ ಕ್ರಿಯೇಟಿವ್ ಹೆಡ್ ಆಗಿರುವ ಪ್ರಿಯಾಂಶು ಚೋಪ್ರಾ, ’L.G.M’ ಹೊಸ ಪರಿಕಲ್ಪನೆಯಾಗಿದೆ. ಅನೇಕ ಸ್ವಾರಸ್ಯಕರ ಅಂಶಗಳು ಚಿತ್ರದಲ್ಲಿವೆ. ಪ್ರತಿಭಾನ್ವಿತ ಚಿತ್ರತಂಡ ಹಾಗೂ ತಾಂತ್ರಿಕ ಬಳಗದವರು ಚಿತ್ರದಲ್ಲಿದ್ದಾರೆ ಎಂದಿದ್ದಾರೆ.
ರಮೇಶ್ ಥಮಿಳ್ಮಣಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ’L.G.M’ ಸಿನಿಮಾ ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದ್ದು, ಹರೀಶ್ ಕಲ್ಯಾಣ್, ನದಿಯಾ ಹಾಗೂ ಲವ್ ಟು ಡೇ ಖ್ಯಾತಿಯ ಇವಾನಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಯೋಗಿ ಬಾಬು ಹಾಗೂ ಮಿರ್ಚಿ ವಿಜಯ್ ತಾರಾಬಳಗದಲ್ಲಿದ್ದಾರೆ. ರಮೇಶ್ ಥಮಿಳ್ಮಣಿ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ.

lokesh

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

1 hour ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

1 hour ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

2 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

2 hours ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

2 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

3 hours ago