Kabza Upendra Movie Photos HD
ಬೆಂಗಳೂರು : ಮಾತಿನ ನಡುವೆ ಗಾದೆ ಮಾತೊಂದನ್ನು ಹೇಳಿದ್ದ ಸಲುವಾಗಿ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಕೆಲವರು ದಾಖಲಿಸಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದಿಂದ ಸ್ವಲ್ಪ ನಿರಾಳರಾಗಿರುವ ಉಪೇಂದ್ರ, ಇದೀಗ ಈ ಪ್ರಕರಣದ ಕುರಿತು ಪ್ರಪ್ರಥಮ ಪ್ರತಿಕ್ರಿಯೆ ನೀಡಿದ್ದಾರೆ. ‘ಅನ್ಯಾಯದ ಅನುಮಾನಕ್ಕೆ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ, ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ, ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ, ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ ತಾಯಿ, ನನಗೆ ಕೊಡೆ.. ಧನ್ಯವಾದಗಳು Thank you all’ ಎಂದು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರಿದ್ದ ಏಕಸದಸ್ಯ ಪೀಠವು ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಮಧ್ಯಂತರ ತಡೆ ನೀಡಿದೆ. ನಟ ಉಪೇಂದ್ರ ಪರ ವಾದಿಸಿದ ವಕೀಲ ಉದಯ್ ಹೊಳ್ಳ, ತಮ್ಮ ಕಕ್ಷಿದಾರರು ತಾವಾಡಿರುವ ಮಾತುಗಳಿಗೆ ಕ್ಷಮೆ ಯಾಚಿಸಿದ್ದಾರೆ. ಜೊತೆಗೆ ಆ ವಿಡಿಯೋವನ್ನೂ ಸಾಮಾಜಿಕ ಜಾಲತಾಣದಿಂದ ತೆಗೆದು ಹಾಕಿದ್ದಾರೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲ ಎಂದಿದ್ದರು.
ಹೀಗಾಗಿ ಪ್ರಕರಣಕ್ಕೆ ತಡೆ ನೀಡಬೇಕೆಂದು ಕೋರಿ ನಟ ಉಪೇಂದ್ರ ಪರ ವಕೀಲ ಉದಯ್ ಹೊಳ್ಳ ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಪ್ರಕರಣ ಸಂಬಂಧ ದಾಖಲಾಗಿರುವ ಎಫ್ಐಆರ್ಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…