ಚಿತ್ರ ಮಂಜರಿ

ಜಾತಿ ನಿಂದನೆ ಪ್ರಕರಣ: ಹೈಕೋರ್ಟ್​​ ತಡೆ ಸಿಕ್ಕ ಬೆನ್ನಲ್ಲೇ ಉಪೇಂದ್ರ ಪ್ರತಿಕ್ರಿಯೆ

ಬೆಂಗಳೂರು : ಮಾತಿನ ನಡುವೆ ಗಾದೆ ಮಾತೊಂದನ್ನು ಹೇಳಿದ್ದ ಸಲುವಾಗಿ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಕೆಲವರು ದಾಖಲಿಸಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಹಿನ್ನೆಲೆಯಲ್ಲಿ ಪ್ರಕರಣದಿಂದ ಸ್ವಲ್ಪ ನಿರಾಳರಾಗಿರುವ ಉಪೇಂದ್ರ, ಇದೀಗ ಈ ಪ್ರಕರಣದ ಕುರಿತು ಪ್ರಪ್ರಥಮ ಪ್ರತಿಕ್ರಿಯೆ ನೀಡಿದ್ದಾರೆ. ‘ಅನ್ಯಾಯದ ಅನುಮಾನಕ್ಕೆ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ, ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ, ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ, ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ ತಾಯಿ, ನನಗೆ ಕೊಡೆ.. ಧನ್ಯವಾದಗಳು Thank you all’ ಎಂದು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್​ ಚಂದನ್​ಗೌಡರ್​ ಅವರಿದ್ದ ಏಕಸದಸ್ಯ ಪೀಠವು ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್​ಐಆರ್​​ಗೆ ಮಧ್ಯಂತರ ತಡೆ ನೀಡಿದೆ. ನಟ ಉಪೇಂದ್ರ ಪರ ವಾದಿಸಿದ ವಕೀಲ ಉದಯ್​ ಹೊಳ್ಳ, ತಮ್ಮ ಕಕ್ಷಿದಾರರು ತಾವಾಡಿರುವ ಮಾತುಗಳಿಗೆ ಕ್ಷಮೆ ಯಾಚಿಸಿದ್ದಾರೆ. ಜೊತೆಗೆ ಆ ವಿಡಿಯೋವನ್ನೂ ಸಾಮಾಜಿಕ ಜಾಲತಾಣದಿಂದ ತೆಗೆದು ಹಾಕಿದ್ದಾರೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲ ಎಂದಿದ್ದರು.

ಹೀಗಾಗಿ ಪ್ರಕರಣಕ್ಕೆ ತಡೆ ನೀಡಬೇಕೆಂದು ಕೋರಿ ನಟ ಉಪೇಂದ್ರ ಪರ ವಕೀಲ ಉದಯ್​ ಹೊಳ್ಳ ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಪ್ರಕರಣ ಸಂಬಂಧ ದಾಖಲಾಗಿರುವ ಎಫ್​ಐಆರ್​​ಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 hours ago