ಬೆಂಗಳೂರು : ಮೊನ್ನೆಯಷ್ಟೇ ಕಾವೇರಿ ನದಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ನಲ್ಲಿ ಭಾಗಿಯಾಗಿದ್ದ ನಟ ನೆನಪಿರಲಿ ಪ್ರೇಮ್ ,ಇಂದು ಪತ್ರ ಚಳವಳಿಯಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕರೆಕೊಟ್ಟಿದ್ದ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆಯಿರಿ ಚಳವಳಿಯಲ್ಲಿ ಭಾಗಿಯಾಗಿ, ತಮ್ಮ ರಕ್ತದಲ್ಲಿ ಪ್ರಧಾನಿಗೆ ನಟ ಪ್ರೇಮ್ ಪತ್ರ ಬರೆದಿದ್ದಾರೆ.
ಕನ್ನಡ ನೆಲ-ಜಲ ವಿಷಯದಲ್ಲಿ ಹೋರಾಡಲು ಪ್ರೇಮ್ ಯಾವತ್ತಿಗೂ ಮುಂದು. ಅನೇಕ ಹೋರಾಟಗಳಲ್ಲೂ ಅವರು ಭಾಗಿಯಾಗಿದ್ದಾರೆ. ಇದೀಗ ರಕ್ತದಲ್ಲಿ ಪತ್ರ ಬರೆದು, ಆ ಪತ್ರವನ್ನು ಪ್ರಧಾನಿ ಕಳುಹಿಸಿದ್ದಾರೆ. ಕಾವೇರಿ ವಿಷಯದಲ್ಲಿ ಮಧ್ಯಸ್ತಿಕೆ ವಹಿಸಿ, ನಮ್ಮ ನೆಲದ ರೈತರಿಗೆ ನ್ಯಾಯ ದೊರಕಿಸಿ ಎಂದು ಪತ್ರದಲ್ಲಿ ಅವರು ಬರೆದಿದ್ದಾರೆ.
ಪತ್ರ ಬರೆಯುತ್ತಿರುವ ವಿಡಿಯೋವನ್ನು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದು, ಸಾಕಷ್ಟು ಜನರು ಪ್ರತಿಕ್ರಿಯೆ ನೀಡಿದ್ದಾರೆ. ನೆಗೆಟಿವ್ ಮತ್ತು ಪಾಸಿಟಿವ್ ಎರಡೂ ಕಾಮೆಂಟ್ಸ್ ಅಲ್ಲಿ ನೋಡಬಹುದಾಗಿದೆ. ಕೆಲವರು ಭಾವನಾತ್ಮಕವಾಗಿ ಸ್ಪಂದಿಸಿದರೆ, ಇನ್ನೂ ಕೆಲವರು ಕಾನೂನಿನ ಪಾಠವನ್ನೂ ಮಾಡಿದ್ದಾರೆ.
ಕರವೇ (ನಾರಾಯಣ ಗೌಡ ಬಣ) ಇಂದು ರಕ್ತದಲ್ಲಿ ಬರೆದ ಒಂದು ಲಕ್ಷ ಪತ್ರವನ್ನು ಪ್ರಧಾನಿಗೆ ಬರೆಯುವಂತೆ ಕರೆಕೊಟ್ಟಿತ್ತು. ನಟಿ ಅಶ್ವಿನಿ ಗೌಡ ಸೇರಿದಂತೆ ಹಲವರು ಈ ಪತ್ರ ಚಳಿವಳಿಯಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…