ಬೆಂಗಳೂರು : ಮೊನ್ನೆಯಷ್ಟೇ ಕಾವೇರಿ ನದಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ನಲ್ಲಿ ಭಾಗಿಯಾಗಿದ್ದ ನಟ ನೆನಪಿರಲಿ ಪ್ರೇಮ್ ,ಇಂದು ಪತ್ರ ಚಳವಳಿಯಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕರೆಕೊಟ್ಟಿದ್ದ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆಯಿರಿ ಚಳವಳಿಯಲ್ಲಿ ಭಾಗಿಯಾಗಿ, ತಮ್ಮ ರಕ್ತದಲ್ಲಿ ಪ್ರಧಾನಿಗೆ ನಟ ಪ್ರೇಮ್ ಪತ್ರ ಬರೆದಿದ್ದಾರೆ.
ಕನ್ನಡ ನೆಲ-ಜಲ ವಿಷಯದಲ್ಲಿ ಹೋರಾಡಲು ಪ್ರೇಮ್ ಯಾವತ್ತಿಗೂ ಮುಂದು. ಅನೇಕ ಹೋರಾಟಗಳಲ್ಲೂ ಅವರು ಭಾಗಿಯಾಗಿದ್ದಾರೆ. ಇದೀಗ ರಕ್ತದಲ್ಲಿ ಪತ್ರ ಬರೆದು, ಆ ಪತ್ರವನ್ನು ಪ್ರಧಾನಿ ಕಳುಹಿಸಿದ್ದಾರೆ. ಕಾವೇರಿ ವಿಷಯದಲ್ಲಿ ಮಧ್ಯಸ್ತಿಕೆ ವಹಿಸಿ, ನಮ್ಮ ನೆಲದ ರೈತರಿಗೆ ನ್ಯಾಯ ದೊರಕಿಸಿ ಎಂದು ಪತ್ರದಲ್ಲಿ ಅವರು ಬರೆದಿದ್ದಾರೆ.
ಪತ್ರ ಬರೆಯುತ್ತಿರುವ ವಿಡಿಯೋವನ್ನು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದು, ಸಾಕಷ್ಟು ಜನರು ಪ್ರತಿಕ್ರಿಯೆ ನೀಡಿದ್ದಾರೆ. ನೆಗೆಟಿವ್ ಮತ್ತು ಪಾಸಿಟಿವ್ ಎರಡೂ ಕಾಮೆಂಟ್ಸ್ ಅಲ್ಲಿ ನೋಡಬಹುದಾಗಿದೆ. ಕೆಲವರು ಭಾವನಾತ್ಮಕವಾಗಿ ಸ್ಪಂದಿಸಿದರೆ, ಇನ್ನೂ ಕೆಲವರು ಕಾನೂನಿನ ಪಾಠವನ್ನೂ ಮಾಡಿದ್ದಾರೆ.
ಕರವೇ (ನಾರಾಯಣ ಗೌಡ ಬಣ) ಇಂದು ರಕ್ತದಲ್ಲಿ ಬರೆದ ಒಂದು ಲಕ್ಷ ಪತ್ರವನ್ನು ಪ್ರಧಾನಿಗೆ ಬರೆಯುವಂತೆ ಕರೆಕೊಟ್ಟಿತ್ತು. ನಟಿ ಅಶ್ವಿನಿ ಗೌಡ ಸೇರಿದಂತೆ ಹಲವರು ಈ ಪತ್ರ ಚಳಿವಳಿಯಲ್ಲಿ ಭಾಗಿಯಾಗಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…