ಚಿತ್ರ ಮಂಜರಿ

ಕಾವೇರಿ ವಿವಾದ : ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ನಟ ನೆನಪಿರಲಿ ಪ್ರೇಮ್

ಬೆಂಗಳೂರು : ಮೊನ್ನೆಯಷ್ಟೇ ಕಾವೇರಿ ನದಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ನಲ್ಲಿ ಭಾಗಿಯಾಗಿದ್ದ ನಟ ನೆನಪಿರಲಿ ಪ್ರೇಮ್ ,ಇಂದು ಪತ್ರ  ಚಳವಳಿಯಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕರೆಕೊಟ್ಟಿದ್ದ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆಯಿರಿ ಚಳವಳಿಯಲ್ಲಿ ಭಾಗಿಯಾಗಿ, ತಮ್ಮ ರಕ್ತದಲ್ಲಿ ಪ್ರಧಾನಿಗೆ ನಟ ಪ್ರೇಮ್‌ ಪತ್ರ ಬರೆದಿದ್ದಾರೆ.

ಕನ್ನಡ ನೆಲ-ಜಲ ವಿಷಯದಲ್ಲಿ ಹೋರಾಡಲು ಪ್ರೇಮ್ ಯಾವತ್ತಿಗೂ ಮುಂದು. ಅನೇಕ ಹೋರಾಟಗಳಲ್ಲೂ ಅವರು ಭಾಗಿಯಾಗಿದ್ದಾರೆ. ಇದೀಗ ರಕ್ತದಲ್ಲಿ ಪತ್ರ ಬರೆದು, ಆ ಪತ್ರವನ್ನು ಪ್ರಧಾನಿ ಕಳುಹಿಸಿದ್ದಾರೆ. ಕಾವೇರಿ ವಿಷಯದಲ್ಲಿ ಮಧ್ಯಸ್ತಿಕೆ ವಹಿಸಿ, ನಮ್ಮ ನೆಲದ ರೈತರಿಗೆ ನ್ಯಾಯ ದೊರಕಿಸಿ ಎಂದು ಪತ್ರದಲ್ಲಿ ಅವರು ಬರೆದಿದ್ದಾರೆ.

ಪತ್ರ ಬರೆಯುತ್ತಿರುವ ವಿಡಿಯೋವನ್ನು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದು, ಸಾಕಷ್ಟು ಜನರು ಪ್ರತಿಕ್ರಿಯೆ ನೀಡಿದ್ದಾರೆ. ನೆಗೆಟಿವ್ ಮತ್ತು ಪಾಸಿಟಿವ್ ಎರಡೂ ಕಾಮೆಂಟ್ಸ್ ಅಲ್ಲಿ ನೋಡಬಹುದಾಗಿದೆ. ಕೆಲವರು ಭಾವನಾತ್ಮಕವಾಗಿ ಸ್ಪಂದಿಸಿದರೆ, ಇನ್ನೂ ಕೆಲವರು ಕಾನೂನಿನ ಪಾಠವನ್ನೂ ಮಾಡಿದ್ದಾರೆ.

ಕರವೇ (ನಾರಾಯಣ ಗೌಡ ಬಣ) ಇಂದು ರಕ್ತದಲ್ಲಿ ಬರೆದ ಒಂದು ಲಕ್ಷ ಪತ್ರವನ್ನು ಪ್ರಧಾನಿಗೆ ಬರೆಯುವಂತೆ ಕರೆಕೊಟ್ಟಿತ್ತು. ನಟಿ ಅಶ್ವಿನಿ ಗೌಡ ಸೇರಿದಂತೆ ಹಲವರು ಈ ಪತ್ರ ಚಳಿವಳಿಯಲ್ಲಿ ಭಾಗಿಯಾಗಿದ್ದಾರೆ.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

2 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

3 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

5 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

6 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

7 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

7 hours ago