ಬೆಂಗಳೂರು : ಮೊನ್ನೆಯಷ್ಟೇ ಕಾವೇರಿ ನದಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ನಲ್ಲಿ ಭಾಗಿಯಾಗಿದ್ದ ನಟ ನೆನಪಿರಲಿ ಪ್ರೇಮ್ ,ಇಂದು ಪತ್ರ ಚಳವಳಿಯಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕರೆಕೊಟ್ಟಿದ್ದ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆಯಿರಿ ಚಳವಳಿಯಲ್ಲಿ ಭಾಗಿಯಾಗಿ, ತಮ್ಮ ರಕ್ತದಲ್ಲಿ ಪ್ರಧಾನಿಗೆ ನಟ ಪ್ರೇಮ್ ಪತ್ರ ಬರೆದಿದ್ದಾರೆ.
ಕನ್ನಡ ನೆಲ-ಜಲ ವಿಷಯದಲ್ಲಿ ಹೋರಾಡಲು ಪ್ರೇಮ್ ಯಾವತ್ತಿಗೂ ಮುಂದು. ಅನೇಕ ಹೋರಾಟಗಳಲ್ಲೂ ಅವರು ಭಾಗಿಯಾಗಿದ್ದಾರೆ. ಇದೀಗ ರಕ್ತದಲ್ಲಿ ಪತ್ರ ಬರೆದು, ಆ ಪತ್ರವನ್ನು ಪ್ರಧಾನಿ ಕಳುಹಿಸಿದ್ದಾರೆ. ಕಾವೇರಿ ವಿಷಯದಲ್ಲಿ ಮಧ್ಯಸ್ತಿಕೆ ವಹಿಸಿ, ನಮ್ಮ ನೆಲದ ರೈತರಿಗೆ ನ್ಯಾಯ ದೊರಕಿಸಿ ಎಂದು ಪತ್ರದಲ್ಲಿ ಅವರು ಬರೆದಿದ್ದಾರೆ.
ಪತ್ರ ಬರೆಯುತ್ತಿರುವ ವಿಡಿಯೋವನ್ನು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದು, ಸಾಕಷ್ಟು ಜನರು ಪ್ರತಿಕ್ರಿಯೆ ನೀಡಿದ್ದಾರೆ. ನೆಗೆಟಿವ್ ಮತ್ತು ಪಾಸಿಟಿವ್ ಎರಡೂ ಕಾಮೆಂಟ್ಸ್ ಅಲ್ಲಿ ನೋಡಬಹುದಾಗಿದೆ. ಕೆಲವರು ಭಾವನಾತ್ಮಕವಾಗಿ ಸ್ಪಂದಿಸಿದರೆ, ಇನ್ನೂ ಕೆಲವರು ಕಾನೂನಿನ ಪಾಠವನ್ನೂ ಮಾಡಿದ್ದಾರೆ.
ಕರವೇ (ನಾರಾಯಣ ಗೌಡ ಬಣ) ಇಂದು ರಕ್ತದಲ್ಲಿ ಬರೆದ ಒಂದು ಲಕ್ಷ ಪತ್ರವನ್ನು ಪ್ರಧಾನಿಗೆ ಬರೆಯುವಂತೆ ಕರೆಕೊಟ್ಟಿತ್ತು. ನಟಿ ಅಶ್ವಿನಿ ಗೌಡ ಸೇರಿದಂತೆ ಹಲವರು ಈ ಪತ್ರ ಚಳಿವಳಿಯಲ್ಲಿ ಭಾಗಿಯಾಗಿದ್ದಾರೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…