ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ನಮ್ಮ ರೈತರಿಗೆ ಮತ್ತು ರಾಜ್ಯಕ್ಕೆ ತೊಂದರೆಯಾಗಲಿದೆ. ಈ ನಮ್ಮ ಹೋರಾಟಕ್ಕೆ ಕನ್ನಡ ಚಿತ್ರರಂಗದ ಯಾವ ನಟ-ನಟಿಯರು ಸಾಥ್ ನೀಡಿಲ್ಲ, ಸ್ಯಾಂಡಲ್ವುಡ್ ಮೌನ ಮುರಿದಿದೆ ಎಂದು ಕರ್ನಾಟಕ ರಕ್ಷಣ ವೇದಿಕೆ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಇದೀಗ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಮತ್ತು ಸುದೀಪ್ ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿದ ಸಂಗತಿಗೆ ಪ್ರತಿಕ್ರಿಯಿಸಿದ ದರ್ಶನ್, “ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ” ಎಂದು ದರ್ಶನ್ ಹೇಳಿದ್ದಾರೆ.
https://x.com/dasadarshan/status/1704405986113696113?s=20
ಇನ್ನೂ ನಟ ಕಿಚ್ಚ ಸುದೀಪ್ ಕೂಡ ಈ ಕುರಿತು ಟ್ವೀಟ್ ಮಾಡಿದ್ದು, “ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ-ಜಲ-ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…