ಚಿತ್ರ ಮಂಜರಿ

ಕಾವೇರಿ ನೀರು ವಿವಾದ: ನಟ ದರ್ಶನ್ ಮತ್ತು ಕಿಚ್ಚ ಸುದೀಪ್​​ ಟ್ವೀಟ್​

ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ನಮ್ಮ ರೈತರಿಗೆ ಮತ್ತು ರಾಜ್ಯಕ್ಕೆ ತೊಂದರೆಯಾಗಲಿದೆ. ಈ ನಮ್ಮ ಹೋರಾಟಕ್ಕೆ ಕನ್ನಡ ಚಿತ್ರರಂಗದ ಯಾವ ನಟ-ನಟಿಯರು ಸಾಥ್​ ನೀಡಿಲ್ಲ, ಸ್ಯಾಂಡಲ್​ವುಡ್​ ಮೌನ ಮುರಿದಿದೆ ಎಂದು ಕರ್ನಾಟಕ ರಕ್ಷಣ ವೇದಿಕೆ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಇದೀಗ ಚಾಲೆಂಜಿಂಗ್​ ಸ್ಟಾರ್​, ನಟ ದರ್ಶನ್ ಮತ್ತು ಸುದೀಪ್​ ಟ್ವೀಟ್​ ಮಾಡಿದ್ದಾರೆ.

ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿದ ಸಂಗತಿಗೆ ಪ್ರತಿಕ್ರಿಯಿಸಿದ ದರ್ಶನ್, “ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ” ಎಂದು ದರ್ಶನ್​ ಹೇಳಿದ್ದಾರೆ.

https://x.com/dasadarshan/status/1704405986113696113?s=20

ಇನ್ನೂ ನಟ ಕಿಚ್ಚ ಸುದೀಪ್​ ಕೂಡ ಈ ಕುರಿತು ಟ್ವೀಟ್​ ಮಾಡಿದ್ದು, “ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ-ಜಲ-ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ” ಎಂದು ಬರೆದು ಪೋಸ್ಟ್​ ಮಾಡಿದ್ದಾರೆ.

https://x.com/KicchaSudeep/status/1704440438655275020?s=20

andolanait

Recent Posts

ಗ್ರಾಮದೇವತೆ ಹಬ್ಬದಲ್ಲಿ ಅವಘಡ: ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವು

ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…

17 mins ago

ಹುಣಸೂರು| ಅಕ್ರಮ ರಸಗೊಬ್ಬರ ದಾಸ್ತಾನು ಗೋದಾಮಿನ ಮೇಲೆ ದಾಳಿ: 1296 ಮೂಟೆ ಯೂರಿಯಾ ವಶ

ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…

21 mins ago

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

3 hours ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

3 hours ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

3 hours ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

3 hours ago