ಚಿತ್ರ ಮಂಜರಿ

ಕಾವೇರಿ ನೀರು ವಿವಾದ: ನಟ ದರ್ಶನ್ ಮತ್ತು ಕಿಚ್ಚ ಸುದೀಪ್​​ ಟ್ವೀಟ್​

ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ನಮ್ಮ ರೈತರಿಗೆ ಮತ್ತು ರಾಜ್ಯಕ್ಕೆ ತೊಂದರೆಯಾಗಲಿದೆ. ಈ ನಮ್ಮ ಹೋರಾಟಕ್ಕೆ ಕನ್ನಡ ಚಿತ್ರರಂಗದ ಯಾವ ನಟ-ನಟಿಯರು ಸಾಥ್​ ನೀಡಿಲ್ಲ, ಸ್ಯಾಂಡಲ್​ವುಡ್​ ಮೌನ ಮುರಿದಿದೆ ಎಂದು ಕರ್ನಾಟಕ ರಕ್ಷಣ ವೇದಿಕೆ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಇದೀಗ ಚಾಲೆಂಜಿಂಗ್​ ಸ್ಟಾರ್​, ನಟ ದರ್ಶನ್ ಮತ್ತು ಸುದೀಪ್​ ಟ್ವೀಟ್​ ಮಾಡಿದ್ದಾರೆ.

ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿದ ಸಂಗತಿಗೆ ಪ್ರತಿಕ್ರಿಯಿಸಿದ ದರ್ಶನ್, “ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ” ಎಂದು ದರ್ಶನ್​ ಹೇಳಿದ್ದಾರೆ.

https://x.com/dasadarshan/status/1704405986113696113?s=20

ಇನ್ನೂ ನಟ ಕಿಚ್ಚ ಸುದೀಪ್​ ಕೂಡ ಈ ಕುರಿತು ಟ್ವೀಟ್​ ಮಾಡಿದ್ದು, “ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ-ಜಲ-ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ” ಎಂದು ಬರೆದು ಪೋಸ್ಟ್​ ಮಾಡಿದ್ದಾರೆ.

https://x.com/KicchaSudeep/status/1704440438655275020?s=20

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago