ಬೆಂಗಳೂರು : ʼʼಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನೆಡೆಸುತ್ತಿದ್ದಾರೆ. ಕನ್ನಡ ದ ನೆಲ ಜಲ ಭಾಷೆ ಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆʼʼ ಎಂದು ನಟ ಸುದೀಪ್ ಬೆಂಬಲ ಸೂಚಿಸಿದ್ದಾರೆ.
ಈ ಸಂಬಂಧ ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಮುಂಗಾರುಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞ ರು ಕೂಡಲೇ ಟ್ರಬಿನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿ ಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆʼʼ ಎಂದು ಹೇಳಿದ್ದಾರೆ.
ʼಹಿಂದಿನ ಕೆಲವು ಮುಖ್ಯಮಂತ್ರಿ ಗಳಂತೆಯೇ ನಮ್ಮ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರು ತಮಿಳುನಾಡಿನ ಮುಖ್ಯ ಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆ ಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕ ವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ.
ಸದ್ಯದ ಬರ -ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ.ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿʼʼ ಎಂದು ಹಾರೈಸಿದ್ದಾರೆ.
ʼʼಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ -ಮಹದಾಯಿ ನದಿ ಮತ್ತು ಕಳ ಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕುʼʼ ಎಂದು ನಟ ಸುದೀಪ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…