ಬೆಂಗಳೂರು : ʼʼಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನೆಡೆಸುತ್ತಿದ್ದಾರೆ. ಕನ್ನಡ ದ ನೆಲ ಜಲ ಭಾಷೆ ಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆʼʼ ಎಂದು ನಟ ಸುದೀಪ್ ಬೆಂಬಲ ಸೂಚಿಸಿದ್ದಾರೆ.
ಈ ಸಂಬಂಧ ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಮುಂಗಾರುಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞ ರು ಕೂಡಲೇ ಟ್ರಬಿನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿ ಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆʼʼ ಎಂದು ಹೇಳಿದ್ದಾರೆ.
ʼಹಿಂದಿನ ಕೆಲವು ಮುಖ್ಯಮಂತ್ರಿ ಗಳಂತೆಯೇ ನಮ್ಮ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರು ತಮಿಳುನಾಡಿನ ಮುಖ್ಯ ಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆ ಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕ ವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ.
ಸದ್ಯದ ಬರ -ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ.ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿʼʼ ಎಂದು ಹಾರೈಸಿದ್ದಾರೆ.
ʼʼಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ -ಮಹದಾಯಿ ನದಿ ಮತ್ತು ಕಳ ಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕುʼʼ ಎಂದು ನಟ ಸುದೀಪ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…