ಚಿತ್ರ ಮಂಜರಿ

ಕರ್ನಾಟಕದ ಬರ ಪರಿಸ್ಥಿತಿಯನ್ನು ಕೇಂದ್ರಕ್ಕೆ ಮನವರಿಕೆ ಮಾಡಬೇಕು: ನಟ ಸುದೀಪ್‌

ಬೆಂಗಳೂರು : ʼʼಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನೆಡೆಸುತ್ತಿದ್ದಾರೆ. ಕನ್ನಡ ದ ನೆಲ ಜಲ ಭಾಷೆ ಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆʼʼ ಎಂದು ನಟ ಸುದೀಪ್‌ ಬೆಂಬಲ ಸೂಚಿಸಿದ್ದಾರೆ.

ಈ ಸಂಬಂಧ ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಮುಂಗಾರುಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞ ರು ಕೂಡಲೇ ಟ್ರಬಿನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿ ಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆʼʼ ಎಂದು ಹೇಳಿದ್ದಾರೆ.

ʼಹಿಂದಿನ ಕೆಲವು ಮುಖ್ಯಮಂತ್ರಿ ಗಳಂತೆಯೇ ನಮ್ಮ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರು ತಮಿಳುನಾಡಿನ ಮುಖ್ಯ ಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆ ಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕ ವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ.

ಸದ್ಯದ ಬರ -ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ.ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿʼʼ ಎಂದು ಹಾರೈಸಿದ್ದಾರೆ.

ʼʼಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ -ಮಹದಾಯಿ ನದಿ ಮತ್ತು ಕಳ ಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕುʼʼ ಎಂದು ನಟ ಸುದೀಪ್‌ ಟ್ವಿಟರ್‌ ನಲ್ಲಿ ಬರೆದುಕೊಂಡಿದ್ದಾರೆ.

https://x.com/KicchaSudeep/status/1706537729163751451?s=20

andolanait

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿ ಕ್ಯಾಂಟೀನ್‌ಗಳಲ್ಲಿ ದರ ಏರಿಕೆಗೆ ಕಡಿವಾಣ ಹಾಕಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಕರ ಮಾದರಿ ನಡೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ…

2 hours ago

ಓದುಗರ ಪತ್ರ: ರೇಷ್ಮೆ ನೂಲು ಘಟಕಕ್ಕೆ ಹೊಸ ಯಂತ್ರ ಅಳವಡಿಕೆ ಶ್ಲಾಘನೀಯ

ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ…

2 hours ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದ ಆನೆ ಗೌರಿ ಕರೆತರಲು ನಿರ್ಲಕ್ಷ್ಯವೇಕೆ?

ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ…

2 hours ago

ಲಕ್ಷ್ಮಣರೇಖೆ ಕುವೆಂಪು ಕಾವ್ಯಾಭಿವ್ಯಕ್ತಿಗೆ ಆರ್.ಕೆ.ಲಕ್ಷ್ಮಣ್‌ರ ಕಲಾಸ್ಪರ್ಶ

ಎಚ್.ಎಂ.ನಟರಾಜು ಹಾನವಾಡಿ ಕಾವ್ಯ-ಕಲೆಯ ಅನುಸಂಧಾನದ ದಾಖಲೆಯನ್ನು ಸಂಪಾದಿಸಿ ಗ್ರಂಥರೂಪಕ್ಕಿಳಿದ ಡಾ.ಕೆ.ಸಿ.ಶಿವಾರೆಡ್ಡಿ  ಸಾಹಿತ್ಯ ಮತ್ತು ಚಿತ್ರಕಲೆಯ ನಡುವಿನ ಸಂಬಂಧ ಬುದ್ಧಿ ಭಾವಗಳ…

2 hours ago

ಏಕ ಪರದೆಯ ಚಿತ್ರಮಂದಿರ ಅಸ್ತಿತ್ವ , ಚಿತ್ರಗಳ ಪ್ರದರ್ಶನ, ನಿರ್ಮಾಣ ಮಿತವ್ಯಯ ಇತ್ಯಾದಿ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಭಾನುವಾರ ವಿಚಾರಸಂಕಿರಣವೊಂದನ್ನು ಹಮ್ಮಿಕೊಂಡಿದೆ. ಕನ್ನಡ ಚಿತ್ರರಂಗದ ಸಮಸ್ಯೆಗಳತ್ತ ಪಕ್ಷಿನೋಟ ಬೀರಬಹುದಾದ…

3 hours ago