ಚಿತ್ರ ಮಂಜರಿ

ಕರ್ನಾಟಕದ ಬರ ಪರಿಸ್ಥಿತಿಯನ್ನು ಕೇಂದ್ರಕ್ಕೆ ಮನವರಿಕೆ ಮಾಡಬೇಕು: ನಟ ಸುದೀಪ್‌

ಬೆಂಗಳೂರು : ʼʼಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನೆಡೆಸುತ್ತಿದ್ದಾರೆ. ಕನ್ನಡ ದ ನೆಲ ಜಲ ಭಾಷೆ ಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆʼʼ ಎಂದು ನಟ ಸುದೀಪ್‌ ಬೆಂಬಲ ಸೂಚಿಸಿದ್ದಾರೆ.

ಈ ಸಂಬಂಧ ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಮುಂಗಾರುಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞ ರು ಕೂಡಲೇ ಟ್ರಬಿನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿ ಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆʼʼ ಎಂದು ಹೇಳಿದ್ದಾರೆ.

ʼಹಿಂದಿನ ಕೆಲವು ಮುಖ್ಯಮಂತ್ರಿ ಗಳಂತೆಯೇ ನಮ್ಮ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರು ತಮಿಳುನಾಡಿನ ಮುಖ್ಯ ಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆ ಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕ ವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ.

ಸದ್ಯದ ಬರ -ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ.ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿʼʼ ಎಂದು ಹಾರೈಸಿದ್ದಾರೆ.

ʼʼಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ -ಮಹದಾಯಿ ನದಿ ಮತ್ತು ಕಳ ಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕುʼʼ ಎಂದು ನಟ ಸುದೀಪ್‌ ಟ್ವಿಟರ್‌ ನಲ್ಲಿ ಬರೆದುಕೊಂಡಿದ್ದಾರೆ.

https://x.com/KicchaSudeep/status/1706537729163751451?s=20

andolanait

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

28 mins ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

2 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

6 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

10 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

13 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

13 hours ago