ಚಿತ್ರ ಮಂಜರಿ

ಚಂದ್ರಯಾನ 3 ಯಶಸ್ವಿ: ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ನಟ ಪ್ರಕಾಶ್‌ ರಾಜ್

ಬೆಂಗಳೂರು : ಭಾರತೀಯ ಬಾಹ್ಯಾಕಾಶ ವಿಜ್ಞಾನದ ಮುನ್ನಡೆಯ ಪ್ರತೀಕ, ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಇಳಿದಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಬಹುಭಾಷಾ ನಟ ಪ್ರಕಾಶ್ ರೈ, ‘ಭಾರತದ, ಮನುಕುಲದ ಹೆಮ್ಮೆಯ ಕ್ಷಣಗಳಿವು. ಇಸ್ರೋ, ಚಂದ್ರಯಾನ-3, ವಿಕ್ರಮ್ ಲ್ಯಾಂಡರ್ ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ಧನ್ಯವಾದಗಳು. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು ಇದು ದಾರಿಯಾಗಲಿ’ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಇಸ್ರೋದ ಚಂದ್ರಯಾನ-3ಯನ್ನು ಪ್ರಕಾಶ್‌ ರಾಜ್‌ ತಮಾಷೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಕಾಶ್‌ ರಾಜ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಚಂದ್ರನ ಮೇಲೆ ಕಾಲಿಟ್ಟಾಗ ಅಲ್ಲೂ ಓರ್ವ ಮಲಯಾಳಿ ಚಾ ಅಂಗಡಿ ಇಟ್ಟಿರುತ್ತಾರೆ ಎನ್ನುವ ಅರ್ಥದ ಜೋಕ್‌ ಅನ್ನು ಹಂಚಿಕೊಂಡಿದ್ದ ನಟ ಪ್ರಕಾಶ್‌ ರಾಜ್‌ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವರು ಸ್ಪಷ್ಟೀಕರಣ ನೀಡಿದ್ದರು.

ʼದ್ವೇಷ ದ್ವೇಷವನ್ನು ಮಾತ್ರ ನೋಡುತ್ತದೆ. ಕೇರಳದ ಚಾಯ್‌ವಾಲಾಗಳನ್ನು ಸಂಭ್ರಮಿಸುವ ನಾನು ಆರ್ಮಸ್ಟ್ರಾಂಗ್‌ (ಚಂದಿರನ ಮೇಲೆ ಮೊದಲು ಕಾಲಿಟ್ಟ ಮನುಷ್ಯ) ಕಾಲದ ಜೋಕ್‌ ಅನ್ನು ಉಲ್ಲೇಖಿಸಿದ್ದೆ. ಟ್ರೋಲರ್‌ಗಳು ಯಾವ ಚಾಯ್‌ವಾಲವನ್ನು ಅದರಲ್ಲಿ ಕಂಡಿದ್ದರು? ನಿಮಗೆ ಜೋಕ್‌ ಅನ್ನು ಕಾಣಲು ಸಾಧ್ಯವಾಗದಿದ್ದರೆ, ನೀವೇ ಜೋಕ್‌ ಆಗುತ್ತೀರಿ, ಬೆಳವಣಿಗೆ ಹೊಂದಿರಿʼ ಎಂದು ಪ್ರಕಾಶ್‌ ರಾಜ್‌ ಸ್ಪಷ್ಟನೆ ನೀಡಿದ್ದರು.

andolanait

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

10 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

11 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

11 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

12 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

12 hours ago