ಚಿತ್ರ ಮಂಜರಿ

ಚಂದ್ರಯಾನ 3 ಯಶಸ್ವಿ: ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ನಟ ಪ್ರಕಾಶ್‌ ರಾಜ್

ಬೆಂಗಳೂರು : ಭಾರತೀಯ ಬಾಹ್ಯಾಕಾಶ ವಿಜ್ಞಾನದ ಮುನ್ನಡೆಯ ಪ್ರತೀಕ, ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಇಳಿದಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಬಹುಭಾಷಾ ನಟ ಪ್ರಕಾಶ್ ರೈ, ‘ಭಾರತದ, ಮನುಕುಲದ ಹೆಮ್ಮೆಯ ಕ್ಷಣಗಳಿವು. ಇಸ್ರೋ, ಚಂದ್ರಯಾನ-3, ವಿಕ್ರಮ್ ಲ್ಯಾಂಡರ್ ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ಧನ್ಯವಾದಗಳು. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು ಇದು ದಾರಿಯಾಗಲಿ’ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಇಸ್ರೋದ ಚಂದ್ರಯಾನ-3ಯನ್ನು ಪ್ರಕಾಶ್‌ ರಾಜ್‌ ತಮಾಷೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಕಾಶ್‌ ರಾಜ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಚಂದ್ರನ ಮೇಲೆ ಕಾಲಿಟ್ಟಾಗ ಅಲ್ಲೂ ಓರ್ವ ಮಲಯಾಳಿ ಚಾ ಅಂಗಡಿ ಇಟ್ಟಿರುತ್ತಾರೆ ಎನ್ನುವ ಅರ್ಥದ ಜೋಕ್‌ ಅನ್ನು ಹಂಚಿಕೊಂಡಿದ್ದ ನಟ ಪ್ರಕಾಶ್‌ ರಾಜ್‌ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವರು ಸ್ಪಷ್ಟೀಕರಣ ನೀಡಿದ್ದರು.

ʼದ್ವೇಷ ದ್ವೇಷವನ್ನು ಮಾತ್ರ ನೋಡುತ್ತದೆ. ಕೇರಳದ ಚಾಯ್‌ವಾಲಾಗಳನ್ನು ಸಂಭ್ರಮಿಸುವ ನಾನು ಆರ್ಮಸ್ಟ್ರಾಂಗ್‌ (ಚಂದಿರನ ಮೇಲೆ ಮೊದಲು ಕಾಲಿಟ್ಟ ಮನುಷ್ಯ) ಕಾಲದ ಜೋಕ್‌ ಅನ್ನು ಉಲ್ಲೇಖಿಸಿದ್ದೆ. ಟ್ರೋಲರ್‌ಗಳು ಯಾವ ಚಾಯ್‌ವಾಲವನ್ನು ಅದರಲ್ಲಿ ಕಂಡಿದ್ದರು? ನಿಮಗೆ ಜೋಕ್‌ ಅನ್ನು ಕಾಣಲು ಸಾಧ್ಯವಾಗದಿದ್ದರೆ, ನೀವೇ ಜೋಕ್‌ ಆಗುತ್ತೀರಿ, ಬೆಳವಣಿಗೆ ಹೊಂದಿರಿʼ ಎಂದು ಪ್ರಕಾಶ್‌ ರಾಜ್‌ ಸ್ಪಷ್ಟನೆ ನೀಡಿದ್ದರು.

andolanait

Recent Posts

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

37 seconds ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

3 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

14 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

31 mins ago

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

11 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

11 hours ago