ಚಿತ್ರ ಮಂಜರಿ

ರಕ್ಕಮ್ಮ ಹಾಡಿನ ಮೂಲಕ ಎಲ್ಲರ ಮನಗೆದ್ದ ಜಾಕ್ವಲಿನ್‌ ವಿರುದ್ದ 200 ಕೋಟಿ ಸುಲಿಗೆ ಪ್ರಕರಣದಲ್ಲಿ ಚಾರ್ಜ್‌ ಶೀಟ್‌

ಮುಂಬೈ: ವಿಕ್ರಾಂತ್‌ ರೋಣ ಸಿನೆಮಾ ಖ್ಯಾತಿಯ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ವಿರುದ್ಧ ರೂ. 200 ಕೋಟಿ ಸುಲಿಗೆ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಹೆಚ್ಚುವರಿ ಚಾರ್ಜ್‌ಶೀಟ್‌ನಲ್ಲಿ ಜಾಕ್ವೆಲಿನ್‌ ಹೆಸರನ್ನು ಸೇರಿಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್‌ ಚಂದ್ರಶೇಖರ್‌ ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ.

ಪ್ರಭಾವಿ ರಾಜಕಾರಣಿಗಳ ಆಪ್ತ ಎಂಬ ಸೋಗಿನಲ್ಲಿ ಹಲವು ಮಂದಿಗೆ ವಂಚನೆ ಮಾಡಿದ ಆರೋಪದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ನ ಒಂದೊಂದೇ ಕರ್ಮಕಾಂಡಗಳು ಈಗ ಬಯಲಾಗುತ್ತಿವೆ. ತಾನು ಪ್ರಧಾನಿ ಕಚೇರಿಯ ಅಧಿಕಾರಿ ಎಂದು ನಂಬಿಸಿ ಜೈಲಲ್ಲೇ ಕುಳಿತು Ranbaxy ಕಂಪನಿಯ ಮಾಜಿ ಮಾಲೀಕ ಶಿವಿಂದರ್‌ ಸಿಂಗ್‌ ಅವರ ಪತ್ನಿ ಅದಿತಿ ಸಿಂಗ್‌ ಬಳಿ ಬರೋಬ್ಬರಿ 200 ಕೋಟಿ ರು.ಗಳನ್ನು ಸುಕೇಶ್‌ ಸುಲಿಗೆ ಮಾಡಿದ್ದ ಎಂಬ ಸಂಗತಿ ಬೆಳಕಿಗೆ ಬಂದಿತ್ತು.

ಅ.22ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸುಕೇಶ್‌ ಹಾಗೂ ಅದಿತಿ ಸಿಂಗ್‌ ಅವರ ಸೋದರಿ ಅರುಂಧತಿ ಖನ್ನಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಅದರ ವಿವರ ತನಗೆ ಲಭ್ಯವಾಗಿದೆ. 2020ರ ಜೂನ್‌ನಿಂದ 2021ರ ಮೇ ಅವಧಿಯಲ್ಲಿ ಈ ವಂಚನೆ ನಡೆದಿದೆ ಎಂದು ಟೀವಿ ವಾಹಿನಿಯೊಂದು ವರದಿ ಮಾಡಿತ್ತು.

ಶಿವಿಂದರ್‌ ಸಿಂಗ್‌ ಅವರು ಪ್ರಕರಣವೊಂದರ ಸಂಬಂಧ ಜೈಲಿನಲ್ಲಿದ್ದಾರೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿಸಲು ಅದಿತಿ ಸಿಂಗ್‌ ಪ್ರಯತ್ನಿಸುತ್ತಿದ್ದಾರೆ. ಈ ವಿಷಯ ತಿಳಿದಿದ್ದ ಸುಕೇಶ್‌, ‘ಅಭಿನವ್‌’ ಎಂಬ ಹೆಸರಿನಲ್ಲಿ ಅದಿತಿ ಅವರನ್ನು ಪರಿಚಯಿಸಿಕೊಂಡಿದ್ದ. ತಾನು ಪ್ರಧಾನಮಂತ್ರಿಗಳ ಕಚೇರಿಯ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದೇನೆ. ಆದಾಯ ತೆರಿಗೆ, ಗುಪ್ತಚರ ದಳ ಹಾಗೂ ಕಾನೂನು ಇಲಾಖೆಗಳು ತನ್ನ ಅಧೀನಕ್ಕೆ ಬರುತ್ತವೆ. ಆಯ್ದ ಕುಟುಂಬಗಳ ಜತೆ ಮಾತನಾಡಲು ತನ್ನನ್ನು ನಿಯೋಜಿಸಲಾಗಿದೆ ಎಂದು ಹೇಳಿಕೊಂಡಿದ್ದ.

ಮೊಬೈಲ್‌ ಆ್ಯಪ್‌ ಹಾಗೂ ಧ್ವನಿ ಬದಲಿಸುವ ಸಾಫ್ಟ್‌ವೇರ್‌ಗಳನ್ನು ಬಳಸಿ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ತಾನೇ ಅದಿತಿ ಅವರ ಜತೆ ಮಾತನಾಡಿದ್ದ. ಈ ವೇಳೆ ನಾನೂ ಆತನ ಜತೆ ಮಾತನಾಡಿದ್ದೇನೆ. ಜೈಲಿನಲ್ಲೇ ಕುಳಿತು 200 ಕೋಟಿ ರೂ.ಗಳನ್ನು ಅದಿತಿ ಅವರಿಂದ ಆತ ವರ್ಗಾಯಿಸಿಕೊಂಡಿದ್ದ ಎಂದು ಅರುಂಧತಿ ಅವರು ವಿಚಾರಣೆ ವೇಳೆ ತಿಳಿಸಿದ್ದರು ಎಂದು ವರದಿ ಹೇಳಿತ್ತು.

 

andolana

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

8 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

14 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

15 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

15 hours ago