ಚಿತ್ರ ಮಂಜರಿ

ರಕ್ಕಮ್ಮ ಹಾಡಿನ ಮೂಲಕ ಎಲ್ಲರ ಮನಗೆದ್ದ ಜಾಕ್ವಲಿನ್‌ ವಿರುದ್ದ 200 ಕೋಟಿ ಸುಲಿಗೆ ಪ್ರಕರಣದಲ್ಲಿ ಚಾರ್ಜ್‌ ಶೀಟ್‌

ಮುಂಬೈ: ವಿಕ್ರಾಂತ್‌ ರೋಣ ಸಿನೆಮಾ ಖ್ಯಾತಿಯ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ವಿರುದ್ಧ ರೂ. 200 ಕೋಟಿ ಸುಲಿಗೆ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಹೆಚ್ಚುವರಿ ಚಾರ್ಜ್‌ಶೀಟ್‌ನಲ್ಲಿ ಜಾಕ್ವೆಲಿನ್‌ ಹೆಸರನ್ನು ಸೇರಿಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್‌ ಚಂದ್ರಶೇಖರ್‌ ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ.

ಪ್ರಭಾವಿ ರಾಜಕಾರಣಿಗಳ ಆಪ್ತ ಎಂಬ ಸೋಗಿನಲ್ಲಿ ಹಲವು ಮಂದಿಗೆ ವಂಚನೆ ಮಾಡಿದ ಆರೋಪದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ನ ಒಂದೊಂದೇ ಕರ್ಮಕಾಂಡಗಳು ಈಗ ಬಯಲಾಗುತ್ತಿವೆ. ತಾನು ಪ್ರಧಾನಿ ಕಚೇರಿಯ ಅಧಿಕಾರಿ ಎಂದು ನಂಬಿಸಿ ಜೈಲಲ್ಲೇ ಕುಳಿತು Ranbaxy ಕಂಪನಿಯ ಮಾಜಿ ಮಾಲೀಕ ಶಿವಿಂದರ್‌ ಸಿಂಗ್‌ ಅವರ ಪತ್ನಿ ಅದಿತಿ ಸಿಂಗ್‌ ಬಳಿ ಬರೋಬ್ಬರಿ 200 ಕೋಟಿ ರು.ಗಳನ್ನು ಸುಕೇಶ್‌ ಸುಲಿಗೆ ಮಾಡಿದ್ದ ಎಂಬ ಸಂಗತಿ ಬೆಳಕಿಗೆ ಬಂದಿತ್ತು.

ಅ.22ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸುಕೇಶ್‌ ಹಾಗೂ ಅದಿತಿ ಸಿಂಗ್‌ ಅವರ ಸೋದರಿ ಅರುಂಧತಿ ಖನ್ನಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಅದರ ವಿವರ ತನಗೆ ಲಭ್ಯವಾಗಿದೆ. 2020ರ ಜೂನ್‌ನಿಂದ 2021ರ ಮೇ ಅವಧಿಯಲ್ಲಿ ಈ ವಂಚನೆ ನಡೆದಿದೆ ಎಂದು ಟೀವಿ ವಾಹಿನಿಯೊಂದು ವರದಿ ಮಾಡಿತ್ತು.

ಶಿವಿಂದರ್‌ ಸಿಂಗ್‌ ಅವರು ಪ್ರಕರಣವೊಂದರ ಸಂಬಂಧ ಜೈಲಿನಲ್ಲಿದ್ದಾರೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿಸಲು ಅದಿತಿ ಸಿಂಗ್‌ ಪ್ರಯತ್ನಿಸುತ್ತಿದ್ದಾರೆ. ಈ ವಿಷಯ ತಿಳಿದಿದ್ದ ಸುಕೇಶ್‌, ‘ಅಭಿನವ್‌’ ಎಂಬ ಹೆಸರಿನಲ್ಲಿ ಅದಿತಿ ಅವರನ್ನು ಪರಿಚಯಿಸಿಕೊಂಡಿದ್ದ. ತಾನು ಪ್ರಧಾನಮಂತ್ರಿಗಳ ಕಚೇರಿಯ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದೇನೆ. ಆದಾಯ ತೆರಿಗೆ, ಗುಪ್ತಚರ ದಳ ಹಾಗೂ ಕಾನೂನು ಇಲಾಖೆಗಳು ತನ್ನ ಅಧೀನಕ್ಕೆ ಬರುತ್ತವೆ. ಆಯ್ದ ಕುಟುಂಬಗಳ ಜತೆ ಮಾತನಾಡಲು ತನ್ನನ್ನು ನಿಯೋಜಿಸಲಾಗಿದೆ ಎಂದು ಹೇಳಿಕೊಂಡಿದ್ದ.

ಮೊಬೈಲ್‌ ಆ್ಯಪ್‌ ಹಾಗೂ ಧ್ವನಿ ಬದಲಿಸುವ ಸಾಫ್ಟ್‌ವೇರ್‌ಗಳನ್ನು ಬಳಸಿ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ತಾನೇ ಅದಿತಿ ಅವರ ಜತೆ ಮಾತನಾಡಿದ್ದ. ಈ ವೇಳೆ ನಾನೂ ಆತನ ಜತೆ ಮಾತನಾಡಿದ್ದೇನೆ. ಜೈಲಿನಲ್ಲೇ ಕುಳಿತು 200 ಕೋಟಿ ರೂ.ಗಳನ್ನು ಅದಿತಿ ಅವರಿಂದ ಆತ ವರ್ಗಾಯಿಸಿಕೊಂಡಿದ್ದ ಎಂದು ಅರುಂಧತಿ ಅವರು ವಿಚಾರಣೆ ವೇಳೆ ತಿಳಿಸಿದ್ದರು ಎಂದು ವರದಿ ಹೇಳಿತ್ತು.

 

andolana

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

8 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

8 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

9 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

9 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

10 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

11 hours ago