ಚಿತ್ರ ಮಂಜರಿ

ರಕ್ಕಮ್ಮ ಹಾಡಿನ ಮೂಲಕ ಎಲ್ಲರ ಮನಗೆದ್ದ ಜಾಕ್ವಲಿನ್‌ ವಿರುದ್ದ 200 ಕೋಟಿ ಸುಲಿಗೆ ಪ್ರಕರಣದಲ್ಲಿ ಚಾರ್ಜ್‌ ಶೀಟ್‌

ಮುಂಬೈ: ವಿಕ್ರಾಂತ್‌ ರೋಣ ಸಿನೆಮಾ ಖ್ಯಾತಿಯ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ವಿರುದ್ಧ ರೂ. 200 ಕೋಟಿ ಸುಲಿಗೆ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಹೆಚ್ಚುವರಿ ಚಾರ್ಜ್‌ಶೀಟ್‌ನಲ್ಲಿ ಜಾಕ್ವೆಲಿನ್‌ ಹೆಸರನ್ನು ಸೇರಿಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್‌ ಚಂದ್ರಶೇಖರ್‌ ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ.

ಪ್ರಭಾವಿ ರಾಜಕಾರಣಿಗಳ ಆಪ್ತ ಎಂಬ ಸೋಗಿನಲ್ಲಿ ಹಲವು ಮಂದಿಗೆ ವಂಚನೆ ಮಾಡಿದ ಆರೋಪದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ನ ಒಂದೊಂದೇ ಕರ್ಮಕಾಂಡಗಳು ಈಗ ಬಯಲಾಗುತ್ತಿವೆ. ತಾನು ಪ್ರಧಾನಿ ಕಚೇರಿಯ ಅಧಿಕಾರಿ ಎಂದು ನಂಬಿಸಿ ಜೈಲಲ್ಲೇ ಕುಳಿತು Ranbaxy ಕಂಪನಿಯ ಮಾಜಿ ಮಾಲೀಕ ಶಿವಿಂದರ್‌ ಸಿಂಗ್‌ ಅವರ ಪತ್ನಿ ಅದಿತಿ ಸಿಂಗ್‌ ಬಳಿ ಬರೋಬ್ಬರಿ 200 ಕೋಟಿ ರು.ಗಳನ್ನು ಸುಕೇಶ್‌ ಸುಲಿಗೆ ಮಾಡಿದ್ದ ಎಂಬ ಸಂಗತಿ ಬೆಳಕಿಗೆ ಬಂದಿತ್ತು.

ಅ.22ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸುಕೇಶ್‌ ಹಾಗೂ ಅದಿತಿ ಸಿಂಗ್‌ ಅವರ ಸೋದರಿ ಅರುಂಧತಿ ಖನ್ನಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಅದರ ವಿವರ ತನಗೆ ಲಭ್ಯವಾಗಿದೆ. 2020ರ ಜೂನ್‌ನಿಂದ 2021ರ ಮೇ ಅವಧಿಯಲ್ಲಿ ಈ ವಂಚನೆ ನಡೆದಿದೆ ಎಂದು ಟೀವಿ ವಾಹಿನಿಯೊಂದು ವರದಿ ಮಾಡಿತ್ತು.

ಶಿವಿಂದರ್‌ ಸಿಂಗ್‌ ಅವರು ಪ್ರಕರಣವೊಂದರ ಸಂಬಂಧ ಜೈಲಿನಲ್ಲಿದ್ದಾರೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿಸಲು ಅದಿತಿ ಸಿಂಗ್‌ ಪ್ರಯತ್ನಿಸುತ್ತಿದ್ದಾರೆ. ಈ ವಿಷಯ ತಿಳಿದಿದ್ದ ಸುಕೇಶ್‌, ‘ಅಭಿನವ್‌’ ಎಂಬ ಹೆಸರಿನಲ್ಲಿ ಅದಿತಿ ಅವರನ್ನು ಪರಿಚಯಿಸಿಕೊಂಡಿದ್ದ. ತಾನು ಪ್ರಧಾನಮಂತ್ರಿಗಳ ಕಚೇರಿಯ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದೇನೆ. ಆದಾಯ ತೆರಿಗೆ, ಗುಪ್ತಚರ ದಳ ಹಾಗೂ ಕಾನೂನು ಇಲಾಖೆಗಳು ತನ್ನ ಅಧೀನಕ್ಕೆ ಬರುತ್ತವೆ. ಆಯ್ದ ಕುಟುಂಬಗಳ ಜತೆ ಮಾತನಾಡಲು ತನ್ನನ್ನು ನಿಯೋಜಿಸಲಾಗಿದೆ ಎಂದು ಹೇಳಿಕೊಂಡಿದ್ದ.

ಮೊಬೈಲ್‌ ಆ್ಯಪ್‌ ಹಾಗೂ ಧ್ವನಿ ಬದಲಿಸುವ ಸಾಫ್ಟ್‌ವೇರ್‌ಗಳನ್ನು ಬಳಸಿ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ತಾನೇ ಅದಿತಿ ಅವರ ಜತೆ ಮಾತನಾಡಿದ್ದ. ಈ ವೇಳೆ ನಾನೂ ಆತನ ಜತೆ ಮಾತನಾಡಿದ್ದೇನೆ. ಜೈಲಿನಲ್ಲೇ ಕುಳಿತು 200 ಕೋಟಿ ರೂ.ಗಳನ್ನು ಅದಿತಿ ಅವರಿಂದ ಆತ ವರ್ಗಾಯಿಸಿಕೊಂಡಿದ್ದ ಎಂದು ಅರುಂಧತಿ ಅವರು ವಿಚಾರಣೆ ವೇಳೆ ತಿಳಿಸಿದ್ದರು ಎಂದು ವರದಿ ಹೇಳಿತ್ತು.

 

andolana

Recent Posts

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು…

13 mins ago

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

4 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

4 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

4 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

5 hours ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

5 hours ago