ಚಿತ್ರ ಮಂಜರಿ

ರಕ್ಕಮ್ಮ ಹಾಡಿನ ಮೂಲಕ ಎಲ್ಲರ ಮನಗೆದ್ದ ಜಾಕ್ವಲಿನ್‌ ವಿರುದ್ದ 200 ಕೋಟಿ ಸುಲಿಗೆ ಪ್ರಕರಣದಲ್ಲಿ ಚಾರ್ಜ್‌ ಶೀಟ್‌

ಮುಂಬೈ: ವಿಕ್ರಾಂತ್‌ ರೋಣ ಸಿನೆಮಾ ಖ್ಯಾತಿಯ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ವಿರುದ್ಧ ರೂ. 200 ಕೋಟಿ ಸುಲಿಗೆ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಹೆಚ್ಚುವರಿ ಚಾರ್ಜ್‌ಶೀಟ್‌ನಲ್ಲಿ ಜಾಕ್ವೆಲಿನ್‌ ಹೆಸರನ್ನು ಸೇರಿಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್‌ ಚಂದ್ರಶೇಖರ್‌ ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ.

ಪ್ರಭಾವಿ ರಾಜಕಾರಣಿಗಳ ಆಪ್ತ ಎಂಬ ಸೋಗಿನಲ್ಲಿ ಹಲವು ಮಂದಿಗೆ ವಂಚನೆ ಮಾಡಿದ ಆರೋಪದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ನ ಒಂದೊಂದೇ ಕರ್ಮಕಾಂಡಗಳು ಈಗ ಬಯಲಾಗುತ್ತಿವೆ. ತಾನು ಪ್ರಧಾನಿ ಕಚೇರಿಯ ಅಧಿಕಾರಿ ಎಂದು ನಂಬಿಸಿ ಜೈಲಲ್ಲೇ ಕುಳಿತು Ranbaxy ಕಂಪನಿಯ ಮಾಜಿ ಮಾಲೀಕ ಶಿವಿಂದರ್‌ ಸಿಂಗ್‌ ಅವರ ಪತ್ನಿ ಅದಿತಿ ಸಿಂಗ್‌ ಬಳಿ ಬರೋಬ್ಬರಿ 200 ಕೋಟಿ ರು.ಗಳನ್ನು ಸುಕೇಶ್‌ ಸುಲಿಗೆ ಮಾಡಿದ್ದ ಎಂಬ ಸಂಗತಿ ಬೆಳಕಿಗೆ ಬಂದಿತ್ತು.

ಅ.22ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸುಕೇಶ್‌ ಹಾಗೂ ಅದಿತಿ ಸಿಂಗ್‌ ಅವರ ಸೋದರಿ ಅರುಂಧತಿ ಖನ್ನಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಅದರ ವಿವರ ತನಗೆ ಲಭ್ಯವಾಗಿದೆ. 2020ರ ಜೂನ್‌ನಿಂದ 2021ರ ಮೇ ಅವಧಿಯಲ್ಲಿ ಈ ವಂಚನೆ ನಡೆದಿದೆ ಎಂದು ಟೀವಿ ವಾಹಿನಿಯೊಂದು ವರದಿ ಮಾಡಿತ್ತು.

ಶಿವಿಂದರ್‌ ಸಿಂಗ್‌ ಅವರು ಪ್ರಕರಣವೊಂದರ ಸಂಬಂಧ ಜೈಲಿನಲ್ಲಿದ್ದಾರೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿಸಲು ಅದಿತಿ ಸಿಂಗ್‌ ಪ್ರಯತ್ನಿಸುತ್ತಿದ್ದಾರೆ. ಈ ವಿಷಯ ತಿಳಿದಿದ್ದ ಸುಕೇಶ್‌, ‘ಅಭಿನವ್‌’ ಎಂಬ ಹೆಸರಿನಲ್ಲಿ ಅದಿತಿ ಅವರನ್ನು ಪರಿಚಯಿಸಿಕೊಂಡಿದ್ದ. ತಾನು ಪ್ರಧಾನಮಂತ್ರಿಗಳ ಕಚೇರಿಯ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದೇನೆ. ಆದಾಯ ತೆರಿಗೆ, ಗುಪ್ತಚರ ದಳ ಹಾಗೂ ಕಾನೂನು ಇಲಾಖೆಗಳು ತನ್ನ ಅಧೀನಕ್ಕೆ ಬರುತ್ತವೆ. ಆಯ್ದ ಕುಟುಂಬಗಳ ಜತೆ ಮಾತನಾಡಲು ತನ್ನನ್ನು ನಿಯೋಜಿಸಲಾಗಿದೆ ಎಂದು ಹೇಳಿಕೊಂಡಿದ್ದ.

ಮೊಬೈಲ್‌ ಆ್ಯಪ್‌ ಹಾಗೂ ಧ್ವನಿ ಬದಲಿಸುವ ಸಾಫ್ಟ್‌ವೇರ್‌ಗಳನ್ನು ಬಳಸಿ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ತಾನೇ ಅದಿತಿ ಅವರ ಜತೆ ಮಾತನಾಡಿದ್ದ. ಈ ವೇಳೆ ನಾನೂ ಆತನ ಜತೆ ಮಾತನಾಡಿದ್ದೇನೆ. ಜೈಲಿನಲ್ಲೇ ಕುಳಿತು 200 ಕೋಟಿ ರೂ.ಗಳನ್ನು ಅದಿತಿ ಅವರಿಂದ ಆತ ವರ್ಗಾಯಿಸಿಕೊಂಡಿದ್ದ ಎಂದು ಅರುಂಧತಿ ಅವರು ವಿಚಾರಣೆ ವೇಳೆ ತಿಳಿಸಿದ್ದರು ಎಂದು ವರದಿ ಹೇಳಿತ್ತು.

 

andolana

Recent Posts

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

3 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

3 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

3 hours ago

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

6 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

6 hours ago