ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದ ‘ಮಠ ಮತ್ತು ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಶುಕ್ರವಾರ ಬಂಧನದ ಬೆನ್ನಲೇ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಚೆಕ್ ಬೌನ್ಸ್ ಪ್ರಕರಣದ ಆರೋಪಿ ಗುರುಪ್ರಸಾದ್ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದರು. ಹೀಗಾಗಿ ನ್ಯಾಯಾಲಯವು ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದ್ದರಿಂದ ಗಿರಿನಗರ ಠಾಣೆ ಪೊಲೀಸರು ಶುಕ್ರವಾರ ಗುರುಪ್ರಸಾದ್ ಅವರನ್ನು ಬಂಧಿಸಿದ್ದರು. ಬಳಿಕ 21ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಆರೋಪಿಯಿಂದ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು, ಪ್ರಕರಣದ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿದ್ದಾರೆ.
ಏನಿದು ಚೆಕ್ ಬೌನ್ಸ್ ಪ್ರಕರಣ?: ಕೆಲ ವರ್ಷಗಳ ಹಿಂದೆ ನಿರ್ದೇಶಕ ಗುರುಪ್ರಸಾದ್, ಶ್ರೀನಿವಾಸ್ ಎಂಬವರಿಂದ 30 ಲಕ್ಷ ರೂ. ಸಾಲ ಪಡೆದಿದ್ದರು. ಈ ವೇಳೆ ಶ್ರೀನಿವಾಸ್ಗೆ ಶ್ಯೂರಿಟಿಗಾಗಿ ಚೆಕ್ ನೀಡಿದ್ದರು. ನಿಗದಿತ ಸಮಯದಲ್ಲಿ ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರು ಗುರುಪ್ರಸಾದ್ ವಿರುದ್ಧ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಕೋರ್ಟ್, ಗುರುಪ್ರಸಾದ್ ಅವರಿಗೆ ನೋಟಿಸ್ ನೀಡಿತ್ತು. ಆದ್ರೂ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಇದರಿಂದಾಗಿ ಕೋರ್ಟ್, ನಿರ್ದೇಶಕರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ಜೊತೆಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಗಿರಿನಗರ ಪೊಲೀಸರಿಗೆ ಸೂಚಿಸಲಾಗಿತ್ತು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…