ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ, 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ. ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ. ಇಎಸ್ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್ನ ಕುರ್ಚಿ, ಪ್ರೊಜೆಕ್ಟರ್ಗಳನ್ನು ಜಪ್ತಿ ಮಾಡಿದ್ದರು. ಈಗ ಮತ್ತೊಮ್ಮೆ ಜಯಪ್ರದಾ ಅವರಿಗೆ ಹಿನ್ನಡೆ ಆಗಿದೆ.
ಚೆನ್ನೈನಲ್ಲಿ ಜಯಪ್ರದಾ ಅವರು ರಾಮ್ ಕುಮಾರ್ ಮತ್ತು ರಾಜ ಬಾಬು ಜೊತೆ ಸೇರಿ ಎರಡು ಚಿತ್ರಮಂದಿರಗಳನ್ನು ನಡೆಸುತ್ತಿದ್ದರು. ಅಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯವರು ಇಎಸ್ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು. ಆದರೆ ಅದನ್ನು ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಜಯಪ್ರದಾ ಪಾವತಿಸುತ್ತಿರಲಿಲ್ಲ. ತಮಗೆ ತಮ್ಮ ಪಾಲಿನ ಇಎಸ್ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ತಕರಾರು ತೆಗೆದಿದ್ದರು. ಆಗ ಸರ್ಕಾರಿ ಕಾರ್ಮಿಕರ ವಿಮಾ ನಿಗಮವು ಜಯಪ್ರದಾ ವಿರುದ್ಧ ದೂರು ದಾಖಲಿಸಿತ್ತು.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…