ಚಿತ್ರ ಮಂಜರಿ

ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಚೆನ್ನೈ ನ್ಯಾಯಾಲಯ

ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ, 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ. ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ. ಇಎಸ್​ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್​ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್​ನ ಕುರ್ಚಿ, ಪ್ರೊಜೆಕ್ಟರ್​ಗಳನ್ನು ಜಪ್ತಿ ಮಾಡಿದ್ದರು. ಈಗ ಮತ್ತೊಮ್ಮೆ ಜಯಪ್ರದಾ ಅವರಿಗೆ ಹಿನ್ನಡೆ ಆಗಿದೆ.

ಚೆನ್ನೈನಲ್ಲಿ ಜಯಪ್ರದಾ ಅವರು ರಾಮ್​ ಕುಮಾರ್​ ಮತ್ತು ರಾಜ ಬಾಬು ಜೊತೆ ಸೇರಿ ಎರಡು ಚಿತ್ರಮಂದಿರಗಳನ್ನು ನಡೆಸುತ್ತಿದ್ದರು. ಅಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯವರು ಇಎಸ್​ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು. ಆದರೆ ಅದನ್ನು ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಜಯಪ್ರದಾ ಪಾವತಿಸುತ್ತಿರಲಿಲ್ಲ. ತಮಗೆ ತಮ್ಮ ಪಾಲಿನ ಇಎಸ್​ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ತಕರಾರು ತೆಗೆದಿದ್ದರು. ಆಗ ಸರ್ಕಾರಿ ಕಾರ್ಮಿಕರ ವಿಮಾ ನಿಗಮವು ಜಯಪ್ರದಾ ವಿರುದ್ಧ ದೂರು ದಾಖಲಿಸಿತ್ತು.

lokesh

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

4 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

5 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

6 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

7 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

7 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

7 hours ago