ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ, 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ. ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ. ಇಎಸ್ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್ನ ಕುರ್ಚಿ, ಪ್ರೊಜೆಕ್ಟರ್ಗಳನ್ನು ಜಪ್ತಿ ಮಾಡಿದ್ದರು. ಈಗ ಮತ್ತೊಮ್ಮೆ ಜಯಪ್ರದಾ ಅವರಿಗೆ ಹಿನ್ನಡೆ ಆಗಿದೆ.
ಚೆನ್ನೈನಲ್ಲಿ ಜಯಪ್ರದಾ ಅವರು ರಾಮ್ ಕುಮಾರ್ ಮತ್ತು ರಾಜ ಬಾಬು ಜೊತೆ ಸೇರಿ ಎರಡು ಚಿತ್ರಮಂದಿರಗಳನ್ನು ನಡೆಸುತ್ತಿದ್ದರು. ಅಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯವರು ಇಎಸ್ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು. ಆದರೆ ಅದನ್ನು ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಜಯಪ್ರದಾ ಪಾವತಿಸುತ್ತಿರಲಿಲ್ಲ. ತಮಗೆ ತಮ್ಮ ಪಾಲಿನ ಇಎಸ್ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ತಕರಾರು ತೆಗೆದಿದ್ದರು. ಆಗ ಸರ್ಕಾರಿ ಕಾರ್ಮಿಕರ ವಿಮಾ ನಿಗಮವು ಜಯಪ್ರದಾ ವಿರುದ್ಧ ದೂರು ದಾಖಲಿಸಿತ್ತು.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…