ಚಿತ್ರ ಮಂಜರಿ

ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಚೆನ್ನೈ ನ್ಯಾಯಾಲಯ

ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ, 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ. ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ. ಇಎಸ್​ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್​ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್​ನ ಕುರ್ಚಿ, ಪ್ರೊಜೆಕ್ಟರ್​ಗಳನ್ನು ಜಪ್ತಿ ಮಾಡಿದ್ದರು. ಈಗ ಮತ್ತೊಮ್ಮೆ ಜಯಪ್ರದಾ ಅವರಿಗೆ ಹಿನ್ನಡೆ ಆಗಿದೆ.

ಚೆನ್ನೈನಲ್ಲಿ ಜಯಪ್ರದಾ ಅವರು ರಾಮ್​ ಕುಮಾರ್​ ಮತ್ತು ರಾಜ ಬಾಬು ಜೊತೆ ಸೇರಿ ಎರಡು ಚಿತ್ರಮಂದಿರಗಳನ್ನು ನಡೆಸುತ್ತಿದ್ದರು. ಅಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯವರು ಇಎಸ್​ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು. ಆದರೆ ಅದನ್ನು ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಜಯಪ್ರದಾ ಪಾವತಿಸುತ್ತಿರಲಿಲ್ಲ. ತಮಗೆ ತಮ್ಮ ಪಾಲಿನ ಇಎಸ್​ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ತಕರಾರು ತೆಗೆದಿದ್ದರು. ಆಗ ಸರ್ಕಾರಿ ಕಾರ್ಮಿಕರ ವಿಮಾ ನಿಗಮವು ಜಯಪ್ರದಾ ವಿರುದ್ಧ ದೂರು ದಾಖಲಿಸಿತ್ತು.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago