ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ, 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ. ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ. ಇಎಸ್ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್ನ ಕುರ್ಚಿ, ಪ್ರೊಜೆಕ್ಟರ್ಗಳನ್ನು ಜಪ್ತಿ ಮಾಡಿದ್ದರು. ಈಗ ಮತ್ತೊಮ್ಮೆ ಜಯಪ್ರದಾ ಅವರಿಗೆ ಹಿನ್ನಡೆ ಆಗಿದೆ.
ಚೆನ್ನೈನಲ್ಲಿ ಜಯಪ್ರದಾ ಅವರು ರಾಮ್ ಕುಮಾರ್ ಮತ್ತು ರಾಜ ಬಾಬು ಜೊತೆ ಸೇರಿ ಎರಡು ಚಿತ್ರಮಂದಿರಗಳನ್ನು ನಡೆಸುತ್ತಿದ್ದರು. ಅಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯವರು ಇಎಸ್ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು. ಆದರೆ ಅದನ್ನು ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಜಯಪ್ರದಾ ಪಾವತಿಸುತ್ತಿರಲಿಲ್ಲ. ತಮಗೆ ತಮ್ಮ ಪಾಲಿನ ಇಎಸ್ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ತಕರಾರು ತೆಗೆದಿದ್ದರು. ಆಗ ಸರ್ಕಾರಿ ಕಾರ್ಮಿಕರ ವಿಮಾ ನಿಗಮವು ಜಯಪ್ರದಾ ವಿರುದ್ಧ ದೂರು ದಾಖಲಿಸಿತ್ತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…