ಚಿತ್ರ ಮಂಜರಿ

Chennai Rains: ತಾಯಿ ನೋಡಿಕೊಳ್ಳಲು ಬಂದು ಚೆನ್ನೈ ಮಳೆಗೆ ಸಿಲುಕಿದ ಆಮಿರ್‌ ಖಾನ್‌

ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆನ್ನೈ ನಗರ ಅಕ್ಷರಶಃ ತತ್ತರಿಸಿದೆ. ನಗರದ ಹಲವಾರು ಪ್ರದೇಶಗಳು ನೀರಿನಿಂದ ಜಲಾವೃತವಾಗಿದ್ದು, ನೀರು ಮನೆಗಳ ನಡುವೆ ನದಿಯ ಹಾಗೆ ರಭಸವಾಗಿ ಹರಿದು ಸಾಗುತ್ತಿರುವುದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಕಾಣಬಹುದಾಗಿದೆ.

ಮಳೆಯ ಹೊಡೆತಕ್ಕೆ ಮರಗಳು ಧರೆಗುಳಿದಿದ್ದು, ಎರಡ್ಮೂರು ದಿನಗಳಿಂದ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿದೆ. ಇನ್ನು ನಗರದಲ್ಲಿ ಮೊಬೈಲ್‌ ಸಿಗ್ನಲ್‌ ಹಾಗೂ ವೈಫೈ ಸೇವೆಗಳೂ ಸಹ ಕಡಿತಗೊಂಡಿದ್ದು, ರಸ್ತೆ ಬದಿಯಲ್ಲಿ ಮಲಗುತ್ತಿದ್ದವರಿಂದ ಹಿಡಿದು ಬಂಗಲೆಯಲ್ಲಿ ವಾಸವಿದ್ದ ಶ್ರೀಮಂತರೂ ಸಂತ್ರಸ್ಥರಾಗಿ ಒಂದೇ ಸಾಲಿನಲ್ಲಿ ನಿಂತಿದ್ದಾರೆ.

ಇನ್ನು ಪ್ರಕೃತಿ ಮುಂದೆ ಎಲ್ಲರೂ ಸಮ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದ್ದು, ಮಿಚಾಂಗ್‌ ಚಂಡಮಾರುತದ ಎಫೆಕ್ಟ್‌ ಸಿನಿಮಾ ಸೆಲೆಬ್ರಿಟಿಗಳ ಮೇಲೂ ಸಹ ಬಿದ್ದಿದೆ. ಬಾಲಿವುಡ್‌ ನಟ ಆಮಿರ್‌ ಖಾನ್‌ ತನ್ನ ತಾಯಿಯ ಚಿಕಿತ್ಸೆಗಾಗಿ ಚೆನ್ನ ತಲುಪಿ ಹೊಟೇಲ್‌ನಲ್ಲಿ ತಂಗಿದ್ದರು. ಆದರೆ ಹೊಟೇಲ್‌ಗೂ ಸಹ ನೀರು ನುಗ್ಗಿದ ಪರಿಣಾಮ ಆಮಿರ್‌ ಖಾನ್‌ ಅವರನ್ನು ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ರಕ್ಷಿಸಿ ಬೋಟ್‌ನಲ್ಲಿ ಕರೆದೊಯ್ದಿದ್ದಾರೆ.

ಇನ್ನು ಆಮಿರ್‌ ಖಾನ್‌ ಚೆನ್ನೈ ಪ್ರವಾಹದಲ್ಲಿ ಸಿಲುಕಿದ್ದ ವಿಷಯ ತಮಿಳು ನಟ ವಿಷ್ಣು ವಿಶಾಲ್‌ ಹಂಚಿಕೊಂಡ ಪೋಸ್ಟ್‌ನಿಂದ ಬಹಿರಂಗವಾಗಿದೆ. ರಾಟ್ಸಸನ್‌ ಚಿತ್ರದ ಖ್ಯಾತಿಯ ನಟ ವಿಷ್ಣು ವಿಶಾಲ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ತಮ್ಮನ್ನು ರಕ್ಷಿಸಿದ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿ ಟ್ವೀಟ್‌ ಮಾಡಿದ್ದು, ಇದರಲ್ಲ ವಿಷ್ಣು ವಿಶಾಲ್‌ ಜತೆ ಆಮಿರ್ ಖಾನ್‌ ಸಹ ಇರುವುದನ್ನು ಕಾಣಬಹುದಾಗಿದೆ.

andolana

Recent Posts

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

1 hour ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

1 hour ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

2 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

3 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

4 hours ago