ಚಿತ್ರ ಮಂಜರಿ

Chennai Rains: ತಾಯಿ ನೋಡಿಕೊಳ್ಳಲು ಬಂದು ಚೆನ್ನೈ ಮಳೆಗೆ ಸಿಲುಕಿದ ಆಮಿರ್‌ ಖಾನ್‌

ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆನ್ನೈ ನಗರ ಅಕ್ಷರಶಃ ತತ್ತರಿಸಿದೆ. ನಗರದ ಹಲವಾರು ಪ್ರದೇಶಗಳು ನೀರಿನಿಂದ ಜಲಾವೃತವಾಗಿದ್ದು, ನೀರು ಮನೆಗಳ ನಡುವೆ ನದಿಯ ಹಾಗೆ ರಭಸವಾಗಿ ಹರಿದು ಸಾಗುತ್ತಿರುವುದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಕಾಣಬಹುದಾಗಿದೆ.

ಮಳೆಯ ಹೊಡೆತಕ್ಕೆ ಮರಗಳು ಧರೆಗುಳಿದಿದ್ದು, ಎರಡ್ಮೂರು ದಿನಗಳಿಂದ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿದೆ. ಇನ್ನು ನಗರದಲ್ಲಿ ಮೊಬೈಲ್‌ ಸಿಗ್ನಲ್‌ ಹಾಗೂ ವೈಫೈ ಸೇವೆಗಳೂ ಸಹ ಕಡಿತಗೊಂಡಿದ್ದು, ರಸ್ತೆ ಬದಿಯಲ್ಲಿ ಮಲಗುತ್ತಿದ್ದವರಿಂದ ಹಿಡಿದು ಬಂಗಲೆಯಲ್ಲಿ ವಾಸವಿದ್ದ ಶ್ರೀಮಂತರೂ ಸಂತ್ರಸ್ಥರಾಗಿ ಒಂದೇ ಸಾಲಿನಲ್ಲಿ ನಿಂತಿದ್ದಾರೆ.

ಇನ್ನು ಪ್ರಕೃತಿ ಮುಂದೆ ಎಲ್ಲರೂ ಸಮ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದ್ದು, ಮಿಚಾಂಗ್‌ ಚಂಡಮಾರುತದ ಎಫೆಕ್ಟ್‌ ಸಿನಿಮಾ ಸೆಲೆಬ್ರಿಟಿಗಳ ಮೇಲೂ ಸಹ ಬಿದ್ದಿದೆ. ಬಾಲಿವುಡ್‌ ನಟ ಆಮಿರ್‌ ಖಾನ್‌ ತನ್ನ ತಾಯಿಯ ಚಿಕಿತ್ಸೆಗಾಗಿ ಚೆನ್ನ ತಲುಪಿ ಹೊಟೇಲ್‌ನಲ್ಲಿ ತಂಗಿದ್ದರು. ಆದರೆ ಹೊಟೇಲ್‌ಗೂ ಸಹ ನೀರು ನುಗ್ಗಿದ ಪರಿಣಾಮ ಆಮಿರ್‌ ಖಾನ್‌ ಅವರನ್ನು ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ರಕ್ಷಿಸಿ ಬೋಟ್‌ನಲ್ಲಿ ಕರೆದೊಯ್ದಿದ್ದಾರೆ.

ಇನ್ನು ಆಮಿರ್‌ ಖಾನ್‌ ಚೆನ್ನೈ ಪ್ರವಾಹದಲ್ಲಿ ಸಿಲುಕಿದ್ದ ವಿಷಯ ತಮಿಳು ನಟ ವಿಷ್ಣು ವಿಶಾಲ್‌ ಹಂಚಿಕೊಂಡ ಪೋಸ್ಟ್‌ನಿಂದ ಬಹಿರಂಗವಾಗಿದೆ. ರಾಟ್ಸಸನ್‌ ಚಿತ್ರದ ಖ್ಯಾತಿಯ ನಟ ವಿಷ್ಣು ವಿಶಾಲ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ತಮ್ಮನ್ನು ರಕ್ಷಿಸಿದ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿ ಟ್ವೀಟ್‌ ಮಾಡಿದ್ದು, ಇದರಲ್ಲ ವಿಷ್ಣು ವಿಶಾಲ್‌ ಜತೆ ಆಮಿರ್ ಖಾನ್‌ ಸಹ ಇರುವುದನ್ನು ಕಾಣಬಹುದಾಗಿದೆ.

andolana

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

2 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

18 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

35 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

48 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago