ಚಿತ್ರ ಮಂಜರಿ

Chennai Rains: ತಾಯಿ ನೋಡಿಕೊಳ್ಳಲು ಬಂದು ಚೆನ್ನೈ ಮಳೆಗೆ ಸಿಲುಕಿದ ಆಮಿರ್‌ ಖಾನ್‌

ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆನ್ನೈ ನಗರ ಅಕ್ಷರಶಃ ತತ್ತರಿಸಿದೆ. ನಗರದ ಹಲವಾರು ಪ್ರದೇಶಗಳು ನೀರಿನಿಂದ ಜಲಾವೃತವಾಗಿದ್ದು, ನೀರು ಮನೆಗಳ ನಡುವೆ ನದಿಯ ಹಾಗೆ ರಭಸವಾಗಿ ಹರಿದು ಸಾಗುತ್ತಿರುವುದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಕಾಣಬಹುದಾಗಿದೆ.

ಮಳೆಯ ಹೊಡೆತಕ್ಕೆ ಮರಗಳು ಧರೆಗುಳಿದಿದ್ದು, ಎರಡ್ಮೂರು ದಿನಗಳಿಂದ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿದೆ. ಇನ್ನು ನಗರದಲ್ಲಿ ಮೊಬೈಲ್‌ ಸಿಗ್ನಲ್‌ ಹಾಗೂ ವೈಫೈ ಸೇವೆಗಳೂ ಸಹ ಕಡಿತಗೊಂಡಿದ್ದು, ರಸ್ತೆ ಬದಿಯಲ್ಲಿ ಮಲಗುತ್ತಿದ್ದವರಿಂದ ಹಿಡಿದು ಬಂಗಲೆಯಲ್ಲಿ ವಾಸವಿದ್ದ ಶ್ರೀಮಂತರೂ ಸಂತ್ರಸ್ಥರಾಗಿ ಒಂದೇ ಸಾಲಿನಲ್ಲಿ ನಿಂತಿದ್ದಾರೆ.

ಇನ್ನು ಪ್ರಕೃತಿ ಮುಂದೆ ಎಲ್ಲರೂ ಸಮ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದ್ದು, ಮಿಚಾಂಗ್‌ ಚಂಡಮಾರುತದ ಎಫೆಕ್ಟ್‌ ಸಿನಿಮಾ ಸೆಲೆಬ್ರಿಟಿಗಳ ಮೇಲೂ ಸಹ ಬಿದ್ದಿದೆ. ಬಾಲಿವುಡ್‌ ನಟ ಆಮಿರ್‌ ಖಾನ್‌ ತನ್ನ ತಾಯಿಯ ಚಿಕಿತ್ಸೆಗಾಗಿ ಚೆನ್ನ ತಲುಪಿ ಹೊಟೇಲ್‌ನಲ್ಲಿ ತಂಗಿದ್ದರು. ಆದರೆ ಹೊಟೇಲ್‌ಗೂ ಸಹ ನೀರು ನುಗ್ಗಿದ ಪರಿಣಾಮ ಆಮಿರ್‌ ಖಾನ್‌ ಅವರನ್ನು ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ರಕ್ಷಿಸಿ ಬೋಟ್‌ನಲ್ಲಿ ಕರೆದೊಯ್ದಿದ್ದಾರೆ.

ಇನ್ನು ಆಮಿರ್‌ ಖಾನ್‌ ಚೆನ್ನೈ ಪ್ರವಾಹದಲ್ಲಿ ಸಿಲುಕಿದ್ದ ವಿಷಯ ತಮಿಳು ನಟ ವಿಷ್ಣು ವಿಶಾಲ್‌ ಹಂಚಿಕೊಂಡ ಪೋಸ್ಟ್‌ನಿಂದ ಬಹಿರಂಗವಾಗಿದೆ. ರಾಟ್ಸಸನ್‌ ಚಿತ್ರದ ಖ್ಯಾತಿಯ ನಟ ವಿಷ್ಣು ವಿಶಾಲ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ತಮ್ಮನ್ನು ರಕ್ಷಿಸಿದ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿ ಟ್ವೀಟ್‌ ಮಾಡಿದ್ದು, ಇದರಲ್ಲ ವಿಷ್ಣು ವಿಶಾಲ್‌ ಜತೆ ಆಮಿರ್ ಖಾನ್‌ ಸಹ ಇರುವುದನ್ನು ಕಾಣಬಹುದಾಗಿದೆ.

andolana

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

35 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago