ಚಿತ್ರ ಮಂಜರಿ

Chennai Rains: ತಾಯಿ ನೋಡಿಕೊಳ್ಳಲು ಬಂದು ಚೆನ್ನೈ ಮಳೆಗೆ ಸಿಲುಕಿದ ಆಮಿರ್‌ ಖಾನ್‌

ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆನ್ನೈ ನಗರ ಅಕ್ಷರಶಃ ತತ್ತರಿಸಿದೆ. ನಗರದ ಹಲವಾರು ಪ್ರದೇಶಗಳು ನೀರಿನಿಂದ ಜಲಾವೃತವಾಗಿದ್ದು, ನೀರು ಮನೆಗಳ ನಡುವೆ ನದಿಯ ಹಾಗೆ ರಭಸವಾಗಿ ಹರಿದು ಸಾಗುತ್ತಿರುವುದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಕಾಣಬಹುದಾಗಿದೆ.

ಮಳೆಯ ಹೊಡೆತಕ್ಕೆ ಮರಗಳು ಧರೆಗುಳಿದಿದ್ದು, ಎರಡ್ಮೂರು ದಿನಗಳಿಂದ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿದೆ. ಇನ್ನು ನಗರದಲ್ಲಿ ಮೊಬೈಲ್‌ ಸಿಗ್ನಲ್‌ ಹಾಗೂ ವೈಫೈ ಸೇವೆಗಳೂ ಸಹ ಕಡಿತಗೊಂಡಿದ್ದು, ರಸ್ತೆ ಬದಿಯಲ್ಲಿ ಮಲಗುತ್ತಿದ್ದವರಿಂದ ಹಿಡಿದು ಬಂಗಲೆಯಲ್ಲಿ ವಾಸವಿದ್ದ ಶ್ರೀಮಂತರೂ ಸಂತ್ರಸ್ಥರಾಗಿ ಒಂದೇ ಸಾಲಿನಲ್ಲಿ ನಿಂತಿದ್ದಾರೆ.

ಇನ್ನು ಪ್ರಕೃತಿ ಮುಂದೆ ಎಲ್ಲರೂ ಸಮ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದ್ದು, ಮಿಚಾಂಗ್‌ ಚಂಡಮಾರುತದ ಎಫೆಕ್ಟ್‌ ಸಿನಿಮಾ ಸೆಲೆಬ್ರಿಟಿಗಳ ಮೇಲೂ ಸಹ ಬಿದ್ದಿದೆ. ಬಾಲಿವುಡ್‌ ನಟ ಆಮಿರ್‌ ಖಾನ್‌ ತನ್ನ ತಾಯಿಯ ಚಿಕಿತ್ಸೆಗಾಗಿ ಚೆನ್ನ ತಲುಪಿ ಹೊಟೇಲ್‌ನಲ್ಲಿ ತಂಗಿದ್ದರು. ಆದರೆ ಹೊಟೇಲ್‌ಗೂ ಸಹ ನೀರು ನುಗ್ಗಿದ ಪರಿಣಾಮ ಆಮಿರ್‌ ಖಾನ್‌ ಅವರನ್ನು ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ರಕ್ಷಿಸಿ ಬೋಟ್‌ನಲ್ಲಿ ಕರೆದೊಯ್ದಿದ್ದಾರೆ.

ಇನ್ನು ಆಮಿರ್‌ ಖಾನ್‌ ಚೆನ್ನೈ ಪ್ರವಾಹದಲ್ಲಿ ಸಿಲುಕಿದ್ದ ವಿಷಯ ತಮಿಳು ನಟ ವಿಷ್ಣು ವಿಶಾಲ್‌ ಹಂಚಿಕೊಂಡ ಪೋಸ್ಟ್‌ನಿಂದ ಬಹಿರಂಗವಾಗಿದೆ. ರಾಟ್ಸಸನ್‌ ಚಿತ್ರದ ಖ್ಯಾತಿಯ ನಟ ವಿಷ್ಣು ವಿಶಾಲ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ತಮ್ಮನ್ನು ರಕ್ಷಿಸಿದ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿ ಟ್ವೀಟ್‌ ಮಾಡಿದ್ದು, ಇದರಲ್ಲ ವಿಷ್ಣು ವಿಶಾಲ್‌ ಜತೆ ಆಮಿರ್ ಖಾನ್‌ ಸಹ ಇರುವುದನ್ನು ಕಾಣಬಹುದಾಗಿದೆ.

andolana

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

12 mins ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

21 mins ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

2 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

3 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

4 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

7 hours ago