ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಸೆಳೆತ ಎಂಥವರನ್ನೂ ಬಿಟ್ಟಿಲ್ಲ. ಈಗ ದಕ್ಷಿಣ ಭಾರತದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಕೂಡ ಆ ಸೆಳೆತಕ್ಕೆ ಸಿಕ್ಕಿದ್ದಾರೆ. ಅನೇಕ ಸ್ಟಾರ್ ನಟ-ನಟಿಯರಿಗೆ ಡ್ಯಾನ್ಸ್ ಮಾಡಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗೆ ಭರ್ಜರಿ ಫೇಮಸ್ ಆದ ‘ರಾ ರಾ ರಕ್ಕಮ್ಮ’ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದು ಇದೇ ಜಾನಿ ಮಾಸ್ಟರ್. ಈಗ ಅವರು ತೆರೆಮೇಲೆ ಹೀರೋ ಆಗಿ ಮಿಂಚಲು ಸಿದ್ಧತೆ ಮಾಡಿಕೊಂಡಿರುವುದು ವಿಶೇಷ. ಸಿದ್ಧತೆ ಮಾತ್ರವಲ್ಲ, ಅವರ ಹೊಸ ಸಿನಿಮಾ ಸೆಟ್ಟೇರಿದೆ ಕೂಡ. ಈ ಚಿತ್ರಕ್ಕೆ ‘ಯಥಾ ರಾಜ ತಥಾ ಪ್ರಜಾ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಮೂಲಕ ಅವರ ವೃತ್ತಿಜೀವನದಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ.
ಹೀರೋ ಆಗಿ ಬಡ್ತಿ ಪಡೆಯುತ್ತಿರುವ ಜಾನಿ ಮಾಸ್ಟರ್ಗೆ ಅನೇಕರು ಶುಭ ಹಾರೈಸಿದ್ದಾರೆ. ಇತ್ತೀಚೆಗಷ್ಟೇ ‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಮುಹೂರ್ತ ನೆರವೇರಿತು. ತೆಲುಗು ನಟ ಶರ್ವಾನಂದ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದ್ದಾರೆ. ಸಲ್ಮಾನ್ ಖಾನ್ ಬಾಮೈದ ಆಯುಷ್ ಶರ್ಮಾ ಅವರು ಕ್ಯಾಮೆರಾಗೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಕರುಣಾ ಕುಮಾರ್ ಮೊದಲ ದೃಶ್ಯವನ್ನು ನಿರ್ದೇಶಿಸಿದ್ದಾರೆ.
ಈ ಸಿನಿಮಾದಲ್ಲಿ ಜಾನಿ ಮಾಸ್ಟರ್ ಜತೆಗೆ ‘ಸಿನಿಮಾ ಬಂಡಿ’ ಖ್ಯಾತಿಯ ನಟ ವಿಕಾಸ್ ಕೂಡ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ. ಶ್ರಷ್ಟಿ ವರ್ಮಾ ನಾಯಕಿಯಾಗಿ ನಟಿಸಲಿದ್ದಾರೆ. ಶ್ರೀನಿವಾಸ ವಿಟ್ಟಲ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹರೇಶ್ ಪಟೇಲ್ ಬಂಡವಾಳ ಹೂಡುತ್ತಿದ್ದು, ಅವರಿಗೆ ನಿರ್ದೇಶಕರು ಕೂಡ ಸಾಥ್ ನೀಡಿದ್ದಾರೆ. ಓಂ ಮೂವೀ ಕ್ರಿಯೇಶನ್ಸ್ ಮತ್ತು ಶ್ರೀಕೃಷ್ಣ ಮೂವೀ ಕ್ರಿಯೇಶನ್ಸ್ ಬ್ಯಾನರ್ ಮೂಲಕ ಈ ಸಿನಿಮಾ ಮೂಡಿಬರಲಿದೆ.
‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಬಗ್ಗೆ ಜಾನಿ ಮಾಸ್ಟರ್ ಮಾತನಾಡಿದ್ದಾರೆ. ‘ಮೆಗಾಸ್ಟಾರ್ ಚಿರಂಜೀವಿ ಅವರ ಬರ್ತ್ಡೇ ದಿನದಂದೇ ನಮ್ಮ ಸಿನಿಮಾ ಮುಹೂರ್ತ ಕಂಡಿರುವುದು ಸಂತಸದ ಸಂಗತಿ. ಶ್ರೀನಿವಾಸ್ ಅವರು ಕಥೆ ಹೇಳಿದ ರೀತಿಯೇ ಚೆನ್ನಾಗಿತ್ತು. ವಿಕಾಸ್ ನಟಿಸಿರುವ ‘ಸಿನಿಮಾ ಬಂಡಿ’ ಚಿತ್ರ ನೋಡಿದ್ದೇನೆ. ಇದೀಗ ಅವರೊಂದಿಗೆ ನಟಿಸುತ್ತಿರುವುದಕ್ಕೆ ಖುಷಿ ಇದೆ’ ಎಂದು ಅವರು ಹೇಳಿದ್ದಾರೆ.
ಈ ಸಿನಿಮಾಗೆ ರಾಧನಾ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪೊಲಿಟಿಕಲ್ ಡ್ರಾಮಾ ಶೈಲಿಯ ಈ ಚಿತ್ರದಲ್ಲಿ ನಾಲ್ಕು ಹಾಡುಗಳು ಇರಲಿವೆ. ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಮೂಡಿಬರಲಿರುವ ‘ಯಥಾ ರಾಜ ತಥಾ ಪ್ರಜಾ’ ಚಿತ್ರಕ್ಕೆ ಸೆಪ್ಟೆಂಬರ್ 15ರಂದು ಚಿತ್ರೀಕರಣ ಶುರುವಾಗಲಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಇತ್ತೀಚೆಗೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದು ಸರ್ವೇಸಾಮಾನ್ಯ ಆಗಿಬಿಟ್ಟಿದೆ. ಈ ಕಾರಣದಿಂದ…
ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ. ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ…
ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…