ಚಿತ್ರ ಮಂಜರಿ

ಕೊರಿಯೋಗ್ರಫರ್‌ ಕಮ್‌ ಹೀರೋ ಆಗುತ್ತಿರುವ ಜಾನಿ ಮಾಸ್ಟರ್‌

ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಸೆಳೆತ ಎಂಥವರನ್ನೂ ಬಿಟ್ಟಿಲ್ಲ. ಈಗ ದಕ್ಷಿಣ ಭಾರತದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌  ಕೂಡ ಆ ಸೆಳೆತಕ್ಕೆ ಸಿಕ್ಕಿದ್ದಾರೆ. ಅನೇಕ​ ಸ್ಟಾರ್​ ನಟ-ನಟಿಯರಿಗೆ ಡ್ಯಾನ್ಸ್​ ಮಾಡಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗೆ ಭರ್ಜರಿ ಫೇಮಸ್​ ಆದ ‘ರಾ ರಾ ರಕ್ಕಮ್ಮಹಾಡಿಗೆ ಕೊರಿಯೋಗ್ರಫಿ ಮಾಡಿದ್ದು ಇದೇ ಜಾನಿ ಮಾಸ್ಟರ್​. ಈಗ ಅವರು ತೆರೆಮೇಲೆ ಹೀರೋ ಆಗಿ ಮಿಂಚಲು ಸಿದ್ಧತೆ ಮಾಡಿಕೊಂಡಿರುವುದು ವಿಶೇಷ. ಸಿದ್ಧತೆ ಮಾತ್ರವಲ್ಲ, ಅವರ ಹೊಸ ಸಿನಿಮಾ ಸೆಟ್ಟೇರಿದೆ ಕೂಡ. ಈ ಚಿತ್ರಕ್ಕೆ ‘ಯಥಾ ರಾಜ ತಥಾ ಪ್ರಜಾ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಮೂಲಕ ಅವರ ವೃತ್ತಿಜೀವನದಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ.

ಹೀರೋ ಆಗಿ ಬಡ್ತಿ ಪಡೆಯುತ್ತಿರುವ ಜಾನಿ ಮಾಸ್ಟರ್​ಗೆ ಅನೇಕರು ಶುಭ ಹಾರೈಸಿದ್ದಾರೆ. ಇತ್ತೀಚೆಗಷ್ಟೇ ‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಮುಹೂರ್ತ ನೆರವೇರಿತು. ತೆಲುಗು ನಟ ಶರ್ವಾನಂದ ಮೊದಲ ದೃಶ್ಯಕ್ಕೆ ಕ್ಲ್ಯಾಪ್‌ ಮಾಡಿದ್ದಾರೆ. ಸಲ್ಮಾನ್‌ ಖಾನ್‌ ಬಾಮೈದ ಆಯುಷ್‌ ಶರ್ಮಾ ಅವರು ಕ್ಯಾಮೆರಾಗೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಕರುಣಾ ಕುಮಾರ್‌ ಮೊದಲ ದೃಶ್ಯವನ್ನು ನಿರ್ದೇಶಿಸಿದ್ದಾರೆ.

ಈ ಸಿನಿಮಾದಲ್ಲಿ ಜಾನಿ ಮಾಸ್ಟರ್‌ ಜತೆಗೆ ‘ಸಿನಿಮಾ ಬಂಡಿ’ ಖ್ಯಾತಿಯ ನಟ ವಿಕಾಸ್‌ ಕೂಡ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ. ಶ್ರಷ್ಟಿ ವರ್ಮಾ ನಾಯಕಿಯಾಗಿ ನಟಿಸಲಿದ್ದಾರೆ. ಶ್ರೀನಿವಾಸ ವಿಟ್ಟಲ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹರೇಶ್‌ ಪಟೇಲ್‌ ಬಂಡವಾಳ ಹೂಡುತ್ತಿದ್ದು, ಅವರಿಗೆ ನಿರ್ದೇಶಕರು ಕೂಡ ಸಾಥ್​ ನೀಡಿದ್ದಾರೆ. ಓಂ ಮೂವೀ ಕ್ರಿಯೇಶನ್ಸ್‌ ಮತ್ತು ಶ್ರೀಕೃಷ್ಣ ಮೂವೀ ಕ್ರಿಯೇಶನ್ಸ್‌ ಬ್ಯಾನರ್‌ ಮೂಲಕ ಈ ಸಿನಿಮಾ ಮೂಡಿಬರಲಿದೆ.

‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಬಗ್ಗೆ ಜಾನಿ ಮಾಸ್ಟರ್‌ ಮಾತನಾಡಿದ್ದಾರೆ. ‘ಮೆಗಾಸ್ಟಾರ್‌ ಚಿರಂಜೀವಿ ಅವರ ಬರ್ತ್‌ಡೇ ದಿನದಂದೇ ನಮ್ಮ ಸಿನಿಮಾ ಮುಹೂರ್ತ ಕಂಡಿರುವುದು ಸಂತಸದ ಸಂಗತಿ. ಶ್ರೀನಿವಾಸ್‌ ಅವರು ಕಥೆ ಹೇಳಿದ ರೀತಿಯೇ ಚೆನ್ನಾಗಿತ್ತು. ವಿಕಾಸ್‌ ನಟಿಸಿರುವ ‘ಸಿನಿಮಾ ಬಂಡಿ’ ಚಿತ್ರ ನೋಡಿದ್ದೇನೆ. ಇದೀಗ ಅವರೊಂದಿಗೆ ನಟಿಸುತ್ತಿರುವುದಕ್ಕೆ ಖುಷಿ ಇದೆ’ ಎಂದು ಅವರು ಹೇಳಿದ್ದಾರೆ.

ಈ ಸಿನಿಮಾಗೆ ರಾಧನಾ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪೊಲಿಟಿಕಲ್​ ಡ್ರಾಮಾ ಶೈಲಿಯ ಈ ಚಿತ್ರದಲ್ಲಿ ನಾಲ್ಕು ಹಾಡುಗಳು ಇರಲಿವೆ. ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಮೂಡಿಬರಲಿರುವ ‘ಯಥಾ ರಾಜ ತಥಾ ಪ್ರಜಾ’ ಚಿತ್ರಕ್ಕೆ ಸೆಪ್ಟೆಂಬರ್‌ 15ರಂದು ಚಿತ್ರೀಕರಣ ಶುರುವಾಗಲಿದೆ.

andolana

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

4 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

17 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

19 hours ago