Mysore
24
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಣಬೇಟೆಗಾರನ ರಕ್ತಸಿಕ್ತ ಅಧ್ಯಾಯಕ್ಕೆ ಕ್ರಿಸ್‌ಮಸ್‌ ಹಬ್ಬದಂದು ಮುನ್ನುಡಿ ಬರೆಯಲಿದೆ ʼವೇದʼ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅಭಿನಯದ 125 ನೇ ಸಿನಿಮಾ ಬರುವ ಕ್ರಿಸ್ಮಸ್‌ ಹಬ್ಬದಂದು ತೆರೆಯಲ್ಲಿ ಕಾಣಿಸಿಕೊಳ್ಳಲಿದೆ.


ಈ ಮೂಲಕ ಮತ್ತೊಂದು ಪೋಸ್ಟರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ಈ ಚಿತ್ರಕ್ಕೆ ಹರ್ಷ ಡೈರೆಕ್ಟರ್. ಶಿವಣ್ಣ-ಹರ್ಷ ಕಾಂಬಿನೇಷನ್‍ನ ಭಜರಂಗಿ, ಭಜರಂಗಿ 2, ವಜ್ರಕಾಯ ಹಿಟ್ ಆಗಿದ್ದು ವೇದ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.  ವಿಶೇಷ ಅಂದ್ರೆ, ಶಿವರಾಜ್ ಕುಮಾರ್ ರವರ ಹೋಮ್ ಬ್ಯಾನರ್ ‘ಗೀತಾ ಪಿಕ್ಚರ್ಸ್’ನಲ್ಲಿ ತಯಾರಾಗುತ್ತಿರುವ ಮೊಟ್ಟ ಮೊದಲ ಸಿನಿಮಾ ‘ವೇದ’. ಈ ಮೂಲಕ ಶಿವಣ್ಣ ಪತ್ನಿ ಗೀತಾ ಶಿವರಾಜ್ ಕುಮಾರ್ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಚಿತ್ರದಲ್ಲಿ ನಟ ಅರುಣ್ ಸಾಗರ್ ಪುತ್ರಿ ಆದಿತಿ ಸಾಗರ್ ನಟಿಯಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ರ್ಯಾಂಬೋ 2 ಚಿತ್ರದಲ್ಲಿ ಧಮ್ ಮಾರೋ ಧಮ್ ಹಾಡಿನಲ್ಲಿ ಗಾಯಕಿಯಾಗಿ ಎಂಟ್ರಿ ಕೊಟ್ಟಿದ್ದ ಆದಿತಿ ಸಾಗರ್, ಫ್ರೆಂಚ್ ಬಿರಿಯಾನಿಯಲ್ಲಿ ಸಾವಧಾನ ಬೆಂಗಳೂರು ಹಾಡು ಹಾಡಿದ್ದರು. ಈಗ ನಟಿಯಾಗಿ ವೇದ ಚಿತ್ರಕ್ಕೆ ಬಂದಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ