ಚಿತ್ರ ಮಂಜರಿ

ರಣಬೇಟೆಗಾರನ ರಕ್ತಸಿಕ್ತ ಅಧ್ಯಾಯಕ್ಕೆ ಕ್ರಿಸ್‌ಮಸ್‌ ಹಬ್ಬದಂದು ಮುನ್ನುಡಿ ಬರೆಯಲಿದೆ ʼವೇದʼ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅಭಿನಯದ 125 ನೇ ಸಿನಿಮಾ ಬರುವ ಕ್ರಿಸ್ಮಸ್‌ ಹಬ್ಬದಂದು ತೆರೆಯಲ್ಲಿ ಕಾಣಿಸಿಕೊಳ್ಳಲಿದೆ.


ಈ ಮೂಲಕ ಮತ್ತೊಂದು ಪೋಸ್ಟರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ಈ ಚಿತ್ರಕ್ಕೆ ಹರ್ಷ ಡೈರೆಕ್ಟರ್. ಶಿವಣ್ಣ-ಹರ್ಷ ಕಾಂಬಿನೇಷನ್‍ನ ಭಜರಂಗಿ, ಭಜರಂಗಿ 2, ವಜ್ರಕಾಯ ಹಿಟ್ ಆಗಿದ್ದು ವೇದ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.  ವಿಶೇಷ ಅಂದ್ರೆ, ಶಿವರಾಜ್ ಕುಮಾರ್ ರವರ ಹೋಮ್ ಬ್ಯಾನರ್ ‘ಗೀತಾ ಪಿಕ್ಚರ್ಸ್’ನಲ್ಲಿ ತಯಾರಾಗುತ್ತಿರುವ ಮೊಟ್ಟ ಮೊದಲ ಸಿನಿಮಾ ‘ವೇದ’. ಈ ಮೂಲಕ ಶಿವಣ್ಣ ಪತ್ನಿ ಗೀತಾ ಶಿವರಾಜ್ ಕುಮಾರ್ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಚಿತ್ರದಲ್ಲಿ ನಟ ಅರುಣ್ ಸಾಗರ್ ಪುತ್ರಿ ಆದಿತಿ ಸಾಗರ್ ನಟಿಯಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ರ್ಯಾಂಬೋ 2 ಚಿತ್ರದಲ್ಲಿ ಧಮ್ ಮಾರೋ ಧಮ್ ಹಾಡಿನಲ್ಲಿ ಗಾಯಕಿಯಾಗಿ ಎಂಟ್ರಿ ಕೊಟ್ಟಿದ್ದ ಆದಿತಿ ಸಾಗರ್, ಫ್ರೆಂಚ್ ಬಿರಿಯಾನಿಯಲ್ಲಿ ಸಾವಧಾನ ಬೆಂಗಳೂರು ಹಾಡು ಹಾಡಿದ್ದರು. ಈಗ ನಟಿಯಾಗಿ ವೇದ ಚಿತ್ರಕ್ಕೆ ಬಂದಿದ್ದಾರೆ.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

12 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

13 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

14 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

14 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

14 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

22 hours ago