Mysore
24
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಹಿರಿಯ ನಟ ಅಂಬರೀಶ್ ಹೆಸರಿಡಲು ಸಿಎಂ ಒಪ್ಪಿಗೆ

ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಗೆ ಸ್ಯಾಂಡಲ್ ವುಡ್ ಹಿರಿಯ ನಟ ಅಂಬರೀಶ್ ಹೆಸರಿಡಲು ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಕೊಟ್ಟಿದ್ದಾರೆ. ಇದೇ ವಾರದಲ್ಲೇ ಹೆಸರು ಇಡುವ ಕಾರ್ಯಕ್ರಮ ಕೂಡ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ಇಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು.

ಮಂಡಳಿಯ ಮನವಿಗೆ ಸ್ಪಂದಿಸಿರುವ ಸರಕಾರ ಇದೇ ವಾರದಲ್ಲೇ ಹೆಸರು ಇಡುವ ಒಪ್ಪಿಗೆ ಕೂಡ ನೀಡಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್ ತಿಳಿಸಿದ್ದಾರೆ. ಹಲವು ದಿನಗಳ ಬೇಡಿಕೆ ಈ ಮೂಲಕ ಈಡೇರಿದಂತಾಗಿದೆ.

ಕನ್ನಡ ಚಿತ್ರ ಜಗತ್ತಿಗೆ ಅಂಬರೀಶ್ ಕೊಟ್ಟಿರುವ ಕೊಡುಗೆ ಅಪಾರವಾಗಿದೆ. ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಸಾಕಷ್ಟು ಸಹಾಯವನ್ನೂ ಅಂಬರೀಶ್ ಮಾಡಿದ್ದಾರೆ. ರಾಜಕಾರಣಿಯಾಗಿಯೂ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಈ ಎಲ್ಲ ಸೇವೆಯನ್ನು ಪರಿಗಣಿಸಿರುವ ಸರ್ಕಾರ ರೇಸ್ ಕೋರ್ಸ್ ರಸ್ತೆಗೆ ಹೆಸರು ಇಡಲು ಒಪ್ಪಿಗೆ ನೀಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!