ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಗೆ ಸ್ಯಾಂಡಲ್ ವುಡ್ ಹಿರಿಯ ನಟ ಅಂಬರೀಶ್ ಹೆಸರಿಡಲು ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಕೊಟ್ಟಿದ್ದಾರೆ. ಇದೇ ವಾರದಲ್ಲೇ ಹೆಸರು ಇಡುವ ಕಾರ್ಯಕ್ರಮ ಕೂಡ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ಇಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು.
ಮಂಡಳಿಯ ಮನವಿಗೆ ಸ್ಪಂದಿಸಿರುವ ಸರಕಾರ ಇದೇ ವಾರದಲ್ಲೇ ಹೆಸರು ಇಡುವ ಒಪ್ಪಿಗೆ ಕೂಡ ನೀಡಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್ ತಿಳಿಸಿದ್ದಾರೆ. ಹಲವು ದಿನಗಳ ಬೇಡಿಕೆ ಈ ಮೂಲಕ ಈಡೇರಿದಂತಾಗಿದೆ.
ಕನ್ನಡ ಚಿತ್ರ ಜಗತ್ತಿಗೆ ಅಂಬರೀಶ್ ಕೊಟ್ಟಿರುವ ಕೊಡುಗೆ ಅಪಾರವಾಗಿದೆ. ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಸಾಕಷ್ಟು ಸಹಾಯವನ್ನೂ ಅಂಬರೀಶ್ ಮಾಡಿದ್ದಾರೆ. ರಾಜಕಾರಣಿಯಾಗಿಯೂ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಈ ಎಲ್ಲ ಸೇವೆಯನ್ನು ಪರಿಗಣಿಸಿರುವ ಸರ್ಕಾರ ರೇಸ್ ಕೋರ್ಸ್ ರಸ್ತೆಗೆ ಹೆಸರು ಇಡಲು ಒಪ್ಪಿಗೆ ನೀಡಿದೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…