ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಗೆ ಸ್ಯಾಂಡಲ್ ವುಡ್ ಹಿರಿಯ ನಟ ಅಂಬರೀಶ್ ಹೆಸರಿಡಲು ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಕೊಟ್ಟಿದ್ದಾರೆ. ಇದೇ ವಾರದಲ್ಲೇ ಹೆಸರು ಇಡುವ ಕಾರ್ಯಕ್ರಮ ಕೂಡ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ಇಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು.
ಮಂಡಳಿಯ ಮನವಿಗೆ ಸ್ಪಂದಿಸಿರುವ ಸರಕಾರ ಇದೇ ವಾರದಲ್ಲೇ ಹೆಸರು ಇಡುವ ಒಪ್ಪಿಗೆ ಕೂಡ ನೀಡಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್ ತಿಳಿಸಿದ್ದಾರೆ. ಹಲವು ದಿನಗಳ ಬೇಡಿಕೆ ಈ ಮೂಲಕ ಈಡೇರಿದಂತಾಗಿದೆ.
ಕನ್ನಡ ಚಿತ್ರ ಜಗತ್ತಿಗೆ ಅಂಬರೀಶ್ ಕೊಟ್ಟಿರುವ ಕೊಡುಗೆ ಅಪಾರವಾಗಿದೆ. ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಸಾಕಷ್ಟು ಸಹಾಯವನ್ನೂ ಅಂಬರೀಶ್ ಮಾಡಿದ್ದಾರೆ. ರಾಜಕಾರಣಿಯಾಗಿಯೂ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಈ ಎಲ್ಲ ಸೇವೆಯನ್ನು ಪರಿಗಣಿಸಿರುವ ಸರ್ಕಾರ ರೇಸ್ ಕೋರ್ಸ್ ರಸ್ತೆಗೆ ಹೆಸರು ಇಡಲು ಒಪ್ಪಿಗೆ ನೀಡಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…