ಬೆಂಗಳೂರು: ಕ್ಷೇತ್ರಪತಿ ಕಳೆದ ಶುಕ್ರವಾರ ಬಿಡುಗಡೆಯಾದ ಕನ್ನಡದ ಚಲನಚಿತ್ರ. ಉತ್ತರ ಕರ್ನಾಟಕದ ರೈತರ ಕಥೆಯನ್ನು ಹೇಳುವ ಚಿತ್ರ.
ಗುಳ್ಟು ನವೀನ್ ಶಂಕರ್ ಅಭಿನಯದ ಚಿತ್ರ ವಿಮರ್ಶಕರಿಂದ, ಚಿತ್ರ ಪ್ರೇಮಿಗಳಿಂದ ಪ್ರಶಂಸೆಯ ಮಾತುಗಳನ್ನು ಪಡೆದಿದೆ. ಕ್ಷೇತ್ರಪತಿ ಸಿನಿಮಾವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ವೀಕ್ಷಣೆ ಮಾಡಲಿದ್ದಾರೆ. ಸ್ವತಃ ನಾಯಕ ನಟ ನವೀನ್ ಶಂಕರ್ ಮತ್ತು ಚಿತ್ರತಂಡ ಈ ಇಬ್ಬರು ನಾಯಕರನ್ನು ಭೇಟಿ ಮಾಡಿ ಚಿತ್ರದ ತುಣುಕನ್ನು ತೋರಿಸಿದ್ದಾರೆ.
ಕ್ಷೇತ್ರಪತಿ ಸಿನಿಮಾವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಈ ವಾರಾಂತ್ಯದಲ್ಲಿ ವೀಕ್ಷಣೆ ಮಾಡಲಿದ್ದಾರೆ. ನೀವು ಕೊಟ್ಟ ಸಮಯಕ್ಕೆ, ನಿಮ್ಮ ಪ್ರೋತ್ಸಾಹಕ್ಕೆ ಧನ್ಯವಾದಗಳು ಎಂದು ನವೀನ್ ಶಂಕರ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಶ್ರೀಕಾಂತ್ ಕಟಗಿ ನಿರ್ದೇಶನದ ಈ ಸಿನಿಮಾದಲ್ಲಿ ರೈತರ ಬದುಕಿನ ಕಥೆ ಇದೆ. ರಾಜಕೀಯ ಡ್ರಾಮಾ ಮತ್ತು ಆಕ್ಷನ್ ಇದೆ. ಕೆಜಿಎಫ್`ನಲ್ಲಿ ಯಶ್ ತಾಯಿಯಾಗಿ ನಟಿಸಿದ್ದ ಅರ್ಚನಾ ಜೋಯಿಸ್, ಇಲ್ಲಿ ಪತ್ರಕರ್ತೆಯಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ರಾಹುಲ್ ಐನಾಪುರ, ಹರ್ಷ್ ಅರ್ಜುನ್, ಕೃಷ್ಣ ಹೆಬ್ಬಾಳೆ, ಅಚ್ಯುತ್ ಕುಮಾರ್, ಶೈಲಶ್ರೀ ಅರಸ್, ನಾಟ್ಯ ರಂಗ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…